Webdunia - Bharat's app for daily news and videos

Install App

ಆರು ವರ್ಷದ ಮಗುವನ್ನು ಕಾಮುಕನಿಂದ ರಕ್ಷಿಸಿದ ಮಂಗಗಳು: ಆ ಭಜರಂಗಿಯೇ ಧರೆಗೆ ಬಂದ

Krishnaveni K
ಸೋಮವಾರ, 23 ಸೆಪ್ಟಂಬರ್ 2024 (13:00 IST)
ಲಕ್ನೋ: ಆಂಜನೇಯ ಸ್ವಾಮಿ ಕಲಿಯುಗದಲ್ಲೂ ಜೀವಂತವಾಗಿದ್ದಾನೆ ಎಂದು ಪುರಾಣಗಳು ಹೇಳುತ್ತವೆ. ಅದು ಈ ಮಗುವಿನ ವಿಚಾರದಲ್ಲಿ ನಿಜವಾಗಿದೆ. ಆರು ವರ್ಷದ ಮಗುವನ್ನು ಕಾಮುಕನಿಂದ ಮಂಗಗಳೇ ರಕ್ಷಿಸಿವೆ. ಈ ಘಟನೆಯ ವಿವರ ಇಲ್ಲಿದೆ.

ಮನೆಯ ಬಳಿ ಆಡುತ್ತಿದ್ದ ಮಗುವನ್ನು ಕರೆದೊಯ್ದು ರೇಪ್ ಮಾಡಲೆತ್ನಿಸಿದ ವ್ಯಕ್ತಿಯ ಮೇಲೆ ಗುಂಪಾಗಿ ಬಂದು ಮಂಗಗಳು ದಾಳಿ ಮಾಡಿ ಬಾಲಕಿಯನ್ನು ರಕ್ಷಿಸಿವೆ. ಈ ಘಟನೆ ನಡೆದಿರುವುದು ಉತ್ತರ ಪ್ರದೇಶದಲ್ಲಿ. ಇದೀಗ ಆ ಆಂಜನೇಯನೇ ಮಗುವನ್ನು ರಕ್ಷಿಸಿದೆ ಎಂದು ಕುಟುಂಬದವರು ದೇವರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ.

ಬಾಲಕಿಯ ತಂದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ನನ್ನ ಮಗಳು ಮನೆಯ ಬಳಿ ಆಡುತ್ತಿದ್ದಳು. ಆಗ ಆರೋಪಿ ಆಕೆಯನ್ನು ಉಪಾಯವಾಗಿ ಯಾರೂ ಇಲ್ಲದ ಮನೆಗೆ ಕರೆದೊಯ್ದಿದ್ದ. ಅಲ್ಲಿ ಮಗುವಿನ ಬಟ್ಟೆ ಬಿಚ್ಚಿಸಿದ್ದ. ಬಳಿಕ ಅತ್ಯಾಚಾರಕ್ಕೆ ಯತ್ನಿಸಿದಾಗ ಅಲ್ಲೇ ಇದ್ದ ಮಂಗಗಳ ಗುಂಪು ಆತನ ಮೇಲೆ ದಾಳಿ ಮಾಡಿವೆ. ಮಂಗಗಳ ಕಾಟ ತಡೆಯಲಾಗದೇ ಆತ ಓಡಿ ಹೋಗಿದ್ದಾನೆ’ ಎಂದಿದ್ದಾರೆ.

ಇದೀಗ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದು, ಪೋಸ್ಕೋ ಕಾಯಿದೆಯಡಿ ದೂರು ದಾಖಲಿಸಿ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ. ಮಂಗನ ರೂಪದಲ್ಲಿ ದೇವರೇ ಬಂದು ಮಗುವನ್ನು ರಕ್ಷಿಸಿರಬಹುದು ಎನ್ನಬಹುದು. ಮಗುವಿಗೆ ಆತ ಕೊಲೆ ಬೆದರಿಕೆಯನ್ನೂ ಹಾಕಿದ್ದನಂತೆ. ಇದೀಗ ಮಂಗಗಳಿಂದಾಗಿ ಮಗು ಸುರಕ್ಷಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments