Publish Date: Mon, 19 Jul 2021 (10:40 IST)
Updated Date: Mon, 19 Jul 2021 (10:42 IST)
ನವದೆಹಲಿ: ಇಂದಿನಿಂದ ಸಂಸತ್ ನ ಮಳೆಗಾಲದ ಅಧಿವೇಶನ ಆರಂಭವಾಗಿದ್ದು, ಈ ಬಾರಿಯ ಅಧಿವೇಶನದಲ್ಲಿ ಉತ್ತಮ ವಿಚಾರಗಳು ಚರ್ಚೆಯಾಗುವ ನಿರೀಕ್ಷೆಯಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಸಂಸತ್ ಭವನದಲ್ಲಿ ಮಾತನಾಡಿರುವ ಪ್ರಧಾನಿ ಮೋದಿ ಸಂಸತ್ ಅಧಿವೇಶನಕ್ಕೆ ಬರುವ ಸಂಸದರೆಲ್ಲರಿಗೂ ಲಸಿಕೆ ಪಡೆಯುವಂತೆ ಸಲಹೆ ನೀಡಿದ್ದಾರೆ.
ಲಸಿಕೆ ಪಡೆದು ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಅಧಿವೇಶನದಲ್ಲಿ ಪಾಲ್ಗೊಳ್ಳಿ ಎಂದು ಪ್ರಧಾನಿ ಕರೆ ನೀಡಿದ್ದಾರೆ. ಅಲ್ಲದೆ, ಈ ಬಾರಿಯ ಅಧಿವೇಶನದಲ್ಲಿ ಕೊರೋನಾ ಕುರಿತು ಹೆಚ್ಚಿನ ಚರ್ಚೆಯಾಗಲಿ ಎಂದು ಆಗ್ರಹಿಸಿದ್ದಾರೆ.