Publish Date: Wed, 03 Mar 2021 (07:51 IST)
Updated Date: Wed, 03 Mar 2021 (07:53 IST)
ಬೆಂಗಳೂರು : ತಮ್ಮ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ತಂದೆಯನ್ನು ತಾಯಿ ಮತ್ತು ಮಗ ಸೇರಿ ಸುಪಾರಿ ನೀಡಿ ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸಂತ್ರಸ್ತ ತನ್ನ ಹೆಣ್ಣು ಮಕ್ಕಳ ಮೇಲೆ ಅನುಮಾನ ಪಡುತ್ತಿದ್ದ. ಇದರಿಂದ ಕೋಪಗೊಂಡ ತಾಯಿ ಮಗ ಮೂವರು ಕೊಲೆಗಾರರಿಗೆ 98ಸಾವಿರ ನೀಡಿ ತಂದೆಯನ್ನು ಕೊಲೆ ಮಾಡಿಸಿದ್ದಾರೆ. ಬಳಿಕ ಆತ ಹೃದಯಾಘಾತದಿಂದ ಸಾವನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಈ ಬಗ್ಗೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದಾಗ ಸತ್ಯಾಂಶ ತಿಳಿದು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.