Webdunia - Bharat's app for daily news and videos

Install App

ಇಂಟರ್ನೆಟ್ ಟ್ರೈನಿಂಗ್ ಪಡೆದು ಹೆಂಡತಿಯನ್ನು ಮರ್ಡರ್ ಮಾಡ್ದ!

Webdunia
ಸೋಮವಾರ, 8 ಆಗಸ್ಟ್ 2022 (09:28 IST)
ಭೋಪಾಲ್ : ಪತ್ನಿ ಹೆಸರಿನಲ್ಲಿರುವ ವಿಮೆಯ ಹಣ ಕಬಳಿಸಲು ವ್ಯಕ್ತಿಯೋರ್ವ ಇಂಟರ್ನೆಟ್ನಲ್ಲಿರುವ ವೀಡಿಯೋಗಳನ್ನು ನೋಡಿ ಟ್ರೈನಿಂಗ್ ಪಡೆದು ಹೆಂಡತಿಯನ್ನು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿ ಪತಿಯನ್ನು ಬದ್ರಿಪ್ರಸಾದ್ ಮೀನಾ ಎಂದು ಗುರುತಿಸಲಾಗಿದ್ದು, ತಾನು ಮಾಡಿದ್ದ ಸಾಲವನ್ನು ತೀರಿಸಲು ಹೆಂಡತಿಯ ವಿಮೆಯ ಹಣವನ್ನು ಕ್ಲೈಮ್ ಮಾಡಲು ಆಕೆಯನ್ನೇ ಕೊಲೆ ಮಾಡಿದ್ದಾನೆ.  

ಈ ಕೃತ್ಯವೆಸಗಲು ಆರೋಪಿ ಇಂಟರ್ನೆಟ್ನಿಂದ ಸಹಾಯ ಪಡೆದಿದ್ದಾನೆ. ತನ್ನ ಸಾಲವನ್ನು ತೀರಿಸುವುದು ಹೇಗೆಂದು ತಲೆಕೆಡಿಸಿಕೊಂಡಿದ್ದ ಆರೋಪಿ ಇಂಟರ್ನೆಟ್ನಲ್ಲಿ ಹಲವಾರು ವೀಡಿಯೋಗಳನ್ನು ವೀಕ್ಷಿಸಿದ್ದಾನೆ. ಕೆಲವು ವೀಡಿಯೋಗಳನ್ನು ನೋಡಿದ ಬಳಿಕ ತನ್ನ ಹೆಂಡತಿ ಹೆಸರಿಗೆ ವಿಮೆ ಮಾಡಿಸಿರುವುದು ನೆನಪಾಗಿ, ಹಣಕ್ಕಾಗಿ ಆಕೆಯನ್ನು ಕೊಲ್ಲುವ ನಿರ್ಧಾರ ಮಾಡಿದನು.

ಮೃತ ಮಹಿಳೆಯನ್ನು ಪೂಜಾ ಎಂದು ಗುರುತಿಸಲಾಗಿದ್ದು, ಜುಲೈ 26 ರಂದು ರಾತ್ರಿ 9 ಗಂಟೆ ಸುಮಾರಿಗೆ ಭೋಪಾಲ್ ರಸ್ತೆಯ ಮನಾ ಜೋಡ್ ಬಳಿ ಪೂಜಾ ಗುಂಡಿನಿಂದ ಗಾಯ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. 

ಆರಂಭದಲ್ಲಿ ಆರೋಪಿ ಪೊಲೀಸರ ದಾರಿತಪ್ಪಿಸಲು ಪ್ರಯತ್ನಿಸಿದನು. ಪತ್ನಿ ಮೃತಪಟ್ಟ ನಂತರ ಆಕೆಯನ್ನು ಕೊಲ್ಲಲಾಗಿದೆ ಎಂದು ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಿದ್ದನು. ಆದರೆ ತನಿಖೆ ತೀವ್ರಗೊಳಿಸಿದ ಪೊಲೀಸರಿಗೆ ಕೊಲೆಯಾದ ಸಮಯದಲ್ಲಿ ಆ ನಾಲ್ವರು ಘಟನಾ ಸ್ಥಳದಲ್ಲಿಯೇ ಇರಲಿಲ್ಲ ಎಂದು ತಿಳಿದುಬಂದಿದ್ದು, ನಿಜವಾದ ಆರೋಪಿ ಮೃತ ಮಹಿಳೆಯ ಪತಿಯೇ ಎಂಬ ಸತ್ಯ ಬಹಿರಂಗಗೊಂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments