Publish Date: Sun, 09 Oct 2022 (07:55 IST)
Updated Date: Sun, 09 Oct 2022 (07:58 IST)
ಮುಂಬೈ : ಮುಸ್ಲಿಮರು ಎಲ್ಲಾ ಕ್ಷೇತ್ರಗಳಿಗೂ ಮಹತ್ವದ ಕೊಡುಗೆ ನೀಡಿದ್ದಾರೆ. ಆದರೆ ಮುಸ್ಲಿಂ ಸಮುದಾಯಕ್ಕೆ ತಕ್ಕ ಪ್ರಾಶಸ್ತ್ಯ ಸಿಗುತ್ತಿಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಬೇಸರ ವ್ಯಕ್ತಪಡಿಸಿದ್ದಾರೆ.
ಶನಿವಾರ `ಭಾರತೀಯ ಮುಸ್ಲಿಮರ ಸಮಸ್ಯೆಗಳುಶೀರ್ಷಿಕೆ ಅಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಸ್ಲಿಂ ಸಮುದಾಯಕ್ಕೆ ಸೂಕ್ತ ಸೌಲಭ್ಯ ಒದಗಿಸುವ ಬಗ್ಗೆ ಕರೆ ನೀಡಿದ್ದಾರೆ.
ನಿರುದ್ಯೋಗ ದೇಶದ ಎಲ್ಲಾ ಸಮುದಾಯಗಳ ಸಮಸ್ಯೆಯೂ ಆಗಿದೆ. ಆದಾಗ್ಯೂ ಅಲ್ಪ ಸಂಖ್ಯಾತರ ದೂರುಗಳನ್ನು ಪರಿಶೀಲಿಸುವ ಅಗತ್ಯವಿದೆ. ಮುಸ್ಲಿಂ ಸಮುದಾಯವು ಉರ್ದು ಮೂಲಕ ಕಲೆ, ಕವನ, ಬರವಣಿಗೆ ಕ್ಷೇತ್ರಗಳಲ್ಲಿ ಕೊಡುಗೆ ನೀಡಬಹುದಾಗಿದೆ.