Webdunia - Bharat's app for daily news and videos

Install App

ತಮ್ಮ ವಿರುದ್ಧ ನಿಲ್ಲುವ ರಾಜಕೀಯ ನಾಯಕರ ಮೇಲೆ ಮೋದಿಯಿಂದ ಸಿಬಿಐ ಅಸ್ತ್ರ ಪ್ರಯೋಗ-ಚಂದ್ರಬಾಬು ನಾಯ್ಡು ಆರೋಪ

Webdunia
ಶುಕ್ರವಾರ, 1 ಫೆಬ್ರವರಿ 2019 (05:47 IST)
ಹೈದರಾಬಾದ್ : ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ಬೆಂಬಲಿಸುವ ಪಕ್ಷದ ನಾಯಕರನ್ನು ಸಿಬಿಐಯಿಂದ ರಕ್ಷಿಸುತ್ತಾರೆ ಎಂದು ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಆರೋಪಿಸಿದ್ದಾರೆ.


ಆಂಧ್ರ ಪ್ರದೇಶದ ಅಮರಾವತಿಯಲ್ಲಿ ಮಾತನಾಡಿ ಅವರು, ಕೆ.ಚಂದ್ರಶೇಖರ್ ರಾವ್ ನಿವಾಸದ ಮೇಲೆ ದಾಳಿ ಮಾಡಲು ಸಿಬಿಐ ತಂಡವು ಹೈದ್ರಾಬಾದ್‍ ಗೆ ಬಂದಿತ್ತು. ಆಗ ಕೆ.ಚಂದ್ರಶೇಖರ್ ರಾವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆಂಬಲ ನೀಡುತ್ತಿದ್ದಂತೆ ಸಿಬಿಐ ತಂಡವು ವಾಪಾಸ್ ಆಗಿದೆ. ಜೊತೆಗೆ ಕೆ.ಚಂದ್ರಶೇಖರ್ ರಾವ್ ಅವರ ಮೇಲಿರುವ ಇಎಸ್‍ ಐ ಆಸ್ಪತ್ರೆಯ ಹಗರಣವನ್ನು ಮುಚ್ಚಿ ಹಾಕಲಾಗುತ್ತಿದೆ ಎಂದು ದೂರಿದ್ದಾರೆ.


ರಾಜಕೀಯ ಪಕ್ಷಗಳನ್ನು ತಮ್ಮ ಮುಂದೆ ಶರಣಾಗುವಂತೆ ಪ್ರಧಾನಿ ಮೋದಿ ಅವರು ಪ್ಲಾನ್ ಮಾಡುತ್ತಿದ್ದಾರೆ. ತಮ್ಮ ವಿರುದ್ಧ ನಿಲ್ಲುವ ರಾಜಕೀಯ ನಾಯಕರ ವಿರುದ್ಧ ಸಿಬಿಐ ಅಸ್ತ್ರವನ್ನು ಪ್ರಯೋಗಿಸುತ್ತಾರೆ. ಹೀಗಾಗಿ ತಮ್ಮ ಮುಂದೆ ಶರಣಾಗುವ ನಾಯಕರನ್ನು ರಕ್ಷಿಸುತ್ತಾರೆ ಎಂದು ಚಂದ್ರಬಾಬು ನಾಯ್ಡು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments