Webdunia - Bharat's app for daily news and videos

Install App

ಮೋದಿ ಅಲೆ ಅಂತ್ಯ, ರಾಹುಲ್‌ಗೆ ದೇಶ ಮುನ್ನಡೆಸುವ ಸಾಮರ್ಥ್ಯವಿದೆ: ಶಿವಸೇನೆ

Webdunia
ಶುಕ್ರವಾರ, 27 ಅಕ್ಟೋಬರ್ 2017 (12:56 IST)
ಮಹಾರಾಷ್ಟ್ರದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿರುವ ಶಿವಸೇನೆ ಸದಾ ತನ್ನದೇ ಮಿತ್ರಪಕ್ಷವನ್ನೇ ಟೀಕಿಸುತ್ತಿರುವುದು ಬಿಜೆಪಿಗೆ ಆಕ್ರೋಶ ಉಂಟು ಮಾಡಿದೆ. 
ಪ್ರಧಾನಿ ಮೋದಿಯ ಮಾಂತ್ರಿಕ ಅಲೆ ಅಂತ್ಯವಾಗಿದ್ದು, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ದೇಶವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಶಿವಸೇನೆ ಹೇಳಿಕೆ ನೀಡಿದೆ.
 
ಖಾಸಗಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಶಿವಸೇನೆ ಸಂಸದ ಸಂಜಯ್ ರಾವುತ್, ರಾಹುಲ್ ಗಾಂಧಿ ತುಂಬಾ ಪ್ರಬುದ್ಧರಾಗಿದ್ದಾರೆ. ಅವರಿಗೆ ದೇಶವನ್ನು ಆಳಉವ ಸಾಮರ್ಥ್ಯವಿದೆ ಎಂದು ತಿಳಿಸಿದ್ದಾರೆ.
 
ಅಪೂರ್ಣವಾಗಿರುವ ಜಿಎಸ್‌ಟಿಯನ್ನು ಜಾರಿಗೆ ತಂದ ಮೋದಿ ಸರಕಾರದ ಕ್ರಮ ಸಾರ್ವಜನಿಕರಲ್ಲಿ ಆಕ್ರೋಶ ಮೂಡಿಸಿದೆ. ಜಿಎಸ್‌ಟಿ ಜಾರಿಯಿಂದಾಗಿ ಸಣ್ಣ ಮತ್ತು ಮಧ್ಯಮ ವರ್ತಕರು ಕಂಗಾಲಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದರಿಂದ ದೇಶಾದ್ಯಂತ ಮೋದಿ ಸರಕಾರದ ವಿರುದ್ಧದ ಅಲೆ ಆರಂಭವಾಗಿದೆ ಎಂದು ಕಾರಣ ನೀಡಿದ್ದಾರೆ.
 
ಮುಂಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಗುಜರಾತ್, ಹಿಮಾಚಲ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿಪಕ್ಷಗಳಿಂದ ತೀವ್ರ ಸವಾಲ್ ಎದುರಿಸಬೇಕಾಗಿದೆ ಬಂದಿದೆ ಎಂದು ಶಿವಸೇನೆ ಸಂಸದ ಸಂಜಯ್ ರಾವುತ್ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

Bengaluru Rains: ತೆಪ್ಪದಲ್ಲಿ ಕೂತು ಡಿಕೆ ಶಿವಕುಮಾರ್ ಬೆಂಗಳೂರು ರೌಂಡ್ಸ್: ನೆಟ್ಟಿಗರು ಹೇಳಿದ್ದೇನು

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಮುಂದಿನ ಸುದ್ದಿ
Show comments