Publish Date: Mon, 03 Feb 2020 (10:11 IST)
Updated Date: Mon, 03 Feb 2020 (10:12 IST)
ನವದೆಹಲಿ: ನಿರ್ಭಯಾ ಗ್ಯಾಂಗ್ ರೇಪ್ ಅಪರಾಧಿಗಳು ಪದೇ ಪದೇ ಗಲ್ಲು ಶಿಕ್ಷೆ ಮುಂದೂಡಲು ನಾಟಕ ಮಾಡುತ್ತಿದ್ದು, ಇಂದು ಈ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು ನೀಡುವ ಸಾಧ್ಯತೆಯಿದೆ.
ನಿರ್ಭಯಾ ಅತ್ಯಾಚಾರಿಗಳ ಗಲ್ಲು ಶಿಕ್ಷೆ ದಿನಾಂಕ ನಿಗದಿಗೆ ದೆಹಲಿ ಕೋರ್ಟ್ ಮಹತ್ವದ ತೀರ್ಪು ಕಾಯ್ದಿರಿಸಿದ್ದು, ಇಂದು ಹೊರಬೀಳುವ ನಿರೀಕ್ಷೆಯಿದೆ. ಜತೆಗೆ ಅತ್ಯಾಚಾರಿ ಅಕ್ಷಯ್ ಠಾಕೂರ್ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯ ತೀರ್ಪು ಕೂಡಾ ಇಂದೇ ಹೊರಬೀಳುವ ಸಾಧ್ಯತೆಯಿದೆ.
ಫೆಬ್ರವರಿ 1 ರಂದೇ ಈ ನಾಲ್ವರು ಆರೋಪಿಗಳ ಗಲ್ಲು ಶಿಕ್ಷೆ ಜಾರಿಯಾಗಬೇಕಿತ್ತು. ಆದರೆ ಅಪರಾಧಿಗಳಿಗೆ ಕೊನೆಯದಾಗಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲು ಅವಕಾಶವಿದ್ದಿದ್ದರಿಂದ ಶಿಕ್ಷೆ ಜಾರಿ ಮುಂದೂಡಲಾಯಿತು. ಆದರೆ ನಾಲ್ವರು ಅಪರಾಧಿಗಳ ಗಲ್ಲು ಶಿಕ್ಷೆಗೆ ತಡೆ ನೀಡಿದ್ದ ದೆಹಲಿ ಕೋರ್ಟ್ ಆದೇಶ ಪ್ರಶ್ನಿಸಿ ಕೇಂದ್ರ ಮತ್ತು ದೆಹಲಿ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿತ್ತು.