Publish Date: Mon, 02 Dec 2019 (11:05 IST)
Updated Date: Mon, 02 Dec 2019 (11:06 IST)
ನವದೆಹಲಿ: ಪ್ರಿಯಾಂಕ ರೆಡ್ಡಿ ಅತ್ಯಾಚಾರ, ಕೊಲೆ ಪ್ರಕರಣದ ಬಿಸಿ ಹಬ್ಬಿರುವಾಗಲೇ 2012 ರಲ್ಲಿ ದೆಹಲಿಯಲ್ಲಿ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ಕ್ಷಮಾದಾನ ಅರ್ಜಿಯ ವಿಚಾರವಾಗಿ ಚರ್ಚೆ ನಡೆಯುತ್ತಿದೆ.
ಅರೋಪಿಯಲ್ಲೊಬ್ಬ ಸಲ್ಲಿಸಿರುವ ಕ್ಷಮಾದಾನ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ದೆಹಲಿ ಸರ್ಕಾರ ಶಿಫಾರಸ್ಸು ಮಾಡಿದೆ. ಈ ಪ್ರಕರಣದಲ್ಲಿ ಅರವಿಂದ ಕೇಜ್ರಿವಾಲ್ ಸರ್ಕಾರ ಕ್ಷಮಾದಾನ ಅರ್ಜಿ ತಿರಸ್ಕರಿಸಬೇಕೆಂದು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಗೆ ರವಾನಿಸಿದ್ದಾರೆ.