Webdunia - Bharat's app for daily news and videos

Install App

ಹೊಸ ಮೀಸಲಾತಿ ಅನ್ವಯ ನೇಮಕಾತಿ, ಪ್ರವೇಶಾತಿ ನೀಡುವಂತಿಲ್ಲ

Webdunia
ಮಂಗಳವಾರ, 18 ಏಪ್ರಿಲ್ 2023 (10:29 IST)
ನವದೆಹಲಿ : ಏಪ್ರಿಲ್ 18 ವರೆಗೂ ಹೊಸ ಮೀಸಲಾತಿ ನಿಯಮದ ಅನ್ವಯ ನೇಮಕಾತಿ ಮತ್ತು ಶೈಕ್ಷಣಿಕ ಪ್ರವೇಶಾತಿ  ನೀಡದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
 
ಮುಸ್ಲಿಂ ಸಮುದಾಯದ 4% ಮೀಸಲಾತಿ ರದ್ದು ಮಾಡಿದ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ಸುದೀರ್ಘ ವಿಚಾರಣೆ ಇಂದು ನ್ಯಾ.ಕೆ.ಎಂ ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ನಡೆಯಿತು.

ಅರ್ಜಿದಾರ ಗುಲಾಮ್ ರಸೂಲ್ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ದುಷ್ಯಂತ್ ದವೆ, ಮುಸ್ಲಿಂ ಮೀಸಲಾತಿ ರದ್ದು ಮಾಡಿ ಸರ್ಕಾರ ಈ ಮೀಸಲಾತಿಯನ್ನು ಇತರೆ ಜಾತಿಗಳಿಗೆ ನೀಡಿದೆ. ಈ ಮೂಲಕ ಸರ್ಕಾರ ಸುಪ್ರೀಂಕೋರ್ಟ್ ಹಿಂದಿನ ಆದೇಶಗಳನ್ನು ಉಲ್ಲಂಘಿಸಿದೆ. ಇದೊಂದು ಅಸಾಂವಿಧಾನಿಕ ನಿರ್ಧಾರವಾಗಿದೆ. ರಾತ್ರೋರಾತ್ರಿ ಚುನಾವಣೆ ಸಂದರ್ಭದಲ್ಲಿ ಈ ನಿರ್ಧಾರ ಕೈಗೊಳ್ಳುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದರು.

ಯಾವುದೇ ವರದಿಯನ್ನು ಪಡೆಯದೇ ಮೀಸಲಾತಿ ರದ್ದು ಮಾಡಿರುವುದು 1996ರ ಕಾಯ್ದೆಗೆ ವಿರುದ್ಧವಾಗಿದೆ. ಮುಸ್ಲಿಂ ಸಮುದಾಯವನ್ನು ಜನರಲ್ ಕೆಟಗರಿಗೆ ಸೇರ್ಪಡೆ ಮಾಡಿರುವುದು ಆಘಾತಕಾರಿ ಬೆಳವಣಿಗೆ ಎಂದು ವಾದ ಮಂಡಿಸಿದರು. 

ತುಷಾರ್ ಮೆಹ್ತಾ ಅಫಿಡವಿಟ್ ಸಲ್ಲಿಕೆಗೆ ಮೂರು ದಿನಗಳ ಸಮಯ ಕೇಳಿದ ಹಿನ್ನಲೆಯಲ್ಲಿ ಕೋರ್ಟ್ ಮುಂದಿನ ವಿಚಾರಣೆಯನ್ನು ಏ.18ಕ್ಕೆ ಮುಂದೂಡಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments