Webdunia - Bharat's app for daily news and videos

Install App

ಇನ್ಮುಂದೆ ಹೋಟೆಲ್ ಗಳಲ್ಲಿ ಸೇವಾ ಶುಲ್ಕ ಸೇರಿಸುವಂತಿಲ್ಲ ! ಮಾರ್ಗಸೂಚಿ ಏನಿದೆ?

Webdunia
ಬುಧವಾರ, 6 ಜುಲೈ 2022 (11:08 IST)
ನವದೆಹಲಿ : ಹೋಟೆಲ್, ರೆಸ್ಟೋರೆಂಟ್ಗಳು ಆಹಾರ ಬಿಲ್ನಲ್ಲಿ ಸ್ವಯಂಚಾಲಿತವಾಗಿ ಇಲ್ಲವೇ ಪೂರ್ವನಿಯೋಜಿತವಾಗಿ ಸೇವಾ ಶುಲ್ಕ ಸೇರಿಸುವಂತಿಲ್ಲ,

ಎಂದು ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ ಆದೇಶಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಂಡಿಣiಛಿಟes
ಅನ್ಯಾಯ ವ್ಯಾಪಾರ ವಿಧಾನ ಹಾಗೂ ಗ್ರಾಹಕ ಹಕ್ಕುಗಳ ಉಲ್ಲಂಘನೆ ತಡೆಗಟ್ಟುವ ಸಲುವಾಗಿ ಹೊರಡಿಸಲಾದ ಸಿಸಿಪಿಎ ಮಾರ್ಗಸೂಚಿಯಲ್ಲಿ ದೂರುಗಳನ್ನು ಸಲ್ಲಿಸಲು ಅನುವಾಗುವಂತೆ ರಾಷ್ಟ್ರೀಯ ಗ್ರಾಹಕ ಸಹಾಯವಾಣಿ (ಎನ್ಸಿಎಚ್) ಸಂಖ್ಯೆಯನ್ನು ಕೂಡ ಒದಗಿಸಿದೆ.

1915 ಸಂಖ್ಯೆಗೆ ಕರೆ ಮಾಡುವ ಮೂಲಕ ಅಥವಾ ಇ- ದಾಖಿಲ್ ಜಾಲತಾಣ: www.e-daakhil.nic.in.ಮತ್ತು ಸಿಸಿಪಿಎ ಇಮೇಲ್ ವಿಳಾಸ: com-ccpa@nic.in.ಕ್ಕೆ ದೂರು ಸಲ್ಲಿಸುವ ಮೂಲಕ ನ್ಯಾಯ ಪಡೆದುಕೊಳ್ಳಬಹುದು ಎಂದು ಹೇಳಿದೆ.

ಮಾರ್ಗಸೂಚಿಯಲ್ಲಿ ಏನಿದೆ?

•             ಹೋಟೆಲ್, ರೆಸ್ಟೋರೆಂಟ್ಗಳು, ಆಹಾರ ಬಿಲ್ನಲ್ಲಿ ಸ್ವಯಂಚಾಲಿತವಾಗಿ ಇಲ್ಲವೇ ಪೂರ್ವನಿಯೋಜಿತವಾಗಿ ಸೇವಾ ಶುಲ್ಕ ಸೇರಿಸುವಂತಿಲ್ಲ.
•             ಯಾವುದೇ ಇತರೆ ಹೆಸರಿನಿಂದಲೂ ಸೇವಾ ಶುಲ್ಕ ಸಂಗ್ರಹಿಸಬಾರದು.
•             ಗ್ರಾಹಕರು ಸೇವಾ ಶುಲ್ಕ ಪಾವತಿಸಬೇಕು ಎಂದು ಹೋಟೆಲ್ ಅಥವಾ ರೆಸ್ಟೋರೆಂಟ್ ಒತ್ತಾಯಿಸುವಂತಿಲ್ಲ.
•             ಸೇವಾ ಶುಲ್ಕ ಎಂಬುದು ಸ್ವಯಂಪ್ರೇರಿತ, ಐಚ್ಛಿಕ ಹಾಗೂ ಗ್ರಾಹಕರ ವಿವೇಚನೆಗೆ ಬಿಟ್ಟಿರುತ್ತದೆ ಎಂಬ ವಿಚಾರವನ್ನು ಸ್ಪಷ್ಟವಾಗಿ ಗ್ರಾಹಕರಿಗೆ ತಿಳಿಸಿಬೇಕು.
•             ಸೇವಾ ಶುಲ್ಕ ಸಂಗ್ರಹ ಆಧರಿಸಿ ಪ್ರವೇಶ ನಿರ್ಬಂಧ ಇಲ್ಲವೇ ಸೇವೆಗಳನ್ನು ಆಧರಿಸಿ ನಿಯಮಗಳನ್ನು ಗ್ರಾಹಕರ ಮೇಲೆ ವಿಧಿಸುವಂತಿಲ್ಲ.
•             ಸೇವಾ ಶುಲ್ಕ ಆಹಾರದ ಬಿಲ್ನೊಂದಿಗೇ ಸೇರಿಸಿ ಒಟ್ಟು ಮೊತ್ತದ ಮೇಲೆ ಜಿಎಸ್ಟಿ ವಿಧಿಸುವ ಮೂಲಕ ಸಂಗ್ರಹಿಸುವಂತಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments