Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಕ್ನೋ : ಬಿಜೆಪಿ ಪುನಃ ಅಧಿಕಾರಕ್ಕೆ ಬಂದರೆ ಮುಂದಿನ 5 ವರ್ಷಗಳ ಕಾಲ ರೈತರು ವಿದ್ಯುತ್ ಬಿಲ್ನ್ನು ಪಾವತಿಸುವ ಅವಶ್ಯಕತೆಯಿಲ್ಲ ಎಂದು ಗೃಹಸಚಿವ ಅಮಿತ್ ಶಾ ಭರವಸೆ ನೀಡಿದರು.
ಉತ್ತರಪ್ರದೇಶದ ದಿಬಿಯಾಪುರದ ರ್ಯಾಲಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತನ್ನಿ, ಮಾರ್ಚ್ 18ರಂದು ಉಚಿತ ಗ್ಯಾಸ್ ಸಿಲಿಂಡರ್ಗಳು ನಿಮ್ಮ ಮನೆಗೆ ತಲುಪುತ್ತವೆ. ಇಲ್ಲದಿದ್ದರೆ ಮುಂದಿನ ಐದು ವರ್ಷಗಳವರೆಗೆ ರೈತರು ವಿದ್ಯುತ್ ಬಿಲ್ ಪಾವತಿಸಬೇಕಾಗುತ್ತದೆ ಎಂದರು.
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ಬಗ್ಗೆ ವಿಶ್ವಾಸವನ್ನು ವ್ಯಕ್ತಪಡಿಸಿದ ಅವರು, ಮೊದಲ ಹಾಗೂ ಎರಡನೇ ಹಂತದ ಚುನಾವಣೆಯಿಂದ ಸಮಾಜವಾದಿ ಪಕ್ಷವನ್ನು ನಿರ್ನಾಮ ಮಾಡಲಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.