Webdunia - Bharat's app for daily news and videos

Install App

ಗಡಿಯಲ್ಲಿ ಬ್ರಹ್ಮೋಸ್ ಕ್ಷಿಪಣಿ ಅಳವಡಿಕೆ: ಚೀನಾ ಹೆದರುವ ಅಗತ್ಯವಿಲ್ಲ ಎಂದ ಭಾರತೀಯ ಸೇನೆ

Webdunia
ಮಂಗಳವಾರ, 23 ಆಗಸ್ಟ್ 2016 (20:24 IST)
ಅರುಣಾಚಲ ಪ್ರದೇಶದಲ್ಲಿ ಬ್ರಹ್ಮೋಸ್ ಕ್ಷಿಪಣಿಗಳ ಅಳವಡಿಕೆಗೆ ಚೀನಾ ವಿರೋಧ ವ್ಯಕ್ತಪಡಿಸಿದ ನಂತರ, ಪ್ರತಿಕ್ರಿಯೆ ನೀಡಿದ ಭಾರತೀಯ ಸೇನೆ, ನಮ್ಮ ಸುರಕ್ಷತೆಗಾಗಿ ಕ್ಷಿಪಣಿಗಳನ್ನು ಅಳವಡಿಸಲಾಗುತ್ತಿದೆಯೇ ಹೊರತು ನೆರೆ ರಾಷ್ಟ್ರಗಳಿಗೆ ಆತಂಕ ಉಂಟು ಮಾಡಲು ಅಲ್ಲ ಎಂದು ಸ್ಪಷ್ಟಪಡಿಸಿದೆ.
 
ನಮ್ಮ ದೇಶವನ್ನು ಯಾವ ರೀತಿ ಸುರಕ್ಷಿತವಾಗಿಟ್ಟುಕೊಳ್ಳಬೇಕು ಎನ್ನುವುದು ನಮ್ಮ ನಿರ್ಧಾರ. ಕ್ಷಿಪಣಿಗಳನ್ನು ನೆರೆರಾಷ್ಟ್ರಗಳನ್ನು ಹೆದರಿಸಲು ಅಳವಡಿಸಿಲ್ಲ ಎಂದು ಸೇನಾ ಮೂಲಗಳು ತಿಳಿಸಿವೆ.
 
ಬ್ರಹ್ಮೋಸ್ ಕ್ಷಿಪಣಿಗಳನ್ನು ಅಳವಡಿಸುವುದರಿಂದ ಭಾರತ-ಚೀನಾ ಗಡಿಭಾಗಗಳಲ್ಲಿ ಅಸ್ಥಿರತೆ ಉಂಟು ಮಾಡುತ್ತದೆ ಎನ್ನುವ ಚೀನಾ ದೇಶದ ಎಚ್ಚರಿಕೆಯನ್ನು ಭಾರತ ತಳ್ಳಿಹಾಕಿದೆ. 
 
ಭಾರತ ಗಡಿಭಾಗಗಳಲ್ಲಿ ಸೂಪರ್ ಸೋನಿಕ್ ಬ್ರಹ್ಮೋಸ್ ಕ್ಷಿಪಣಿಗಳನ್ನು ಅಳವಡಿಸುವುದರಿಂದ ಟೀನಾದ ಟಿಬೆಟ್ ಮತ್ತು ಯುನ್ನನ್ ಪ್ರಾಂತ್ಯಗಳಿಗೆ ಗಂಭೀರ ಬೆದರಿಕೆಯೊಡ್ಡಿದಂತಾಗುತ್ತದೆ ಎಂದು ಪೀಪಲ್ಸ್ ಲಿಬರೇಶನ್ ಆರ್ಮಿ ಪ್ರಕಟಿಸಿದೆ. 
 
ಭಾರತ ಪರಮಾಣು ಅಸ್ತ್ರಗಳನ್ನು ಹೊತ್ತೊಯ್ಯುವ ಸಾಮರ್ಥ್ಯವಿರುವ ಬ್ರಹ್ಮೋಸ್ ಕ್ಷಿಪಣಿಗಳನ್ನು ಚೀನಾ ಗಡಿಯಲ್ಲಿ ಅಳವಡಿಸುವುದರಿಂದ ಚೀನಾದ ಗಡಿಭಾಗದಲ್ಲಿರುವ ಪ್ರದೇಶಗಳ ಜನರಲ್ಲಿ ತೀವ್ರ ತೆರೆನಾದ ಆತಂಕ ಸೃಷ್ಟಿಸಿದೆ ಎಂದು ಚೀನಾ ಸೇನಾ ವಕ್ತಾರರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments