Webdunia - Bharat's app for daily news and videos

Install App

ರಾಜ್ಯಸಭೆಯಲ್ಲಿ ಮೋದಿ ಭಾಷಣ ವೇಳೆ ಎದ್ದುಹೋದ ವಿಪಕ್ಷ ಸಂಸದರು

Krishnaveni K
ಬುಧವಾರ, 3 ಜುಲೈ 2024 (14:09 IST)
ನವದೆಹಲಿ: ರಾಜ್ಯಸಭೆಯಲ್ಲಿ ಇಂದು ಪ್ರಧಾನಿ ಮೋದಿ ಭಾಷಣ ಮಾಡಿದ್ದು, ಈ ವೇಳೆ ವಿಪಕ್ಷ ಸಂಸದರು ಪ್ರತಿಭಟಿಸಿ ಸಭಾತ್ಯಾಗ ಮಾಡಿದ್ದಾರೆ. ಇದನ್ನು ಮೋದಿ ಖಂಡಿಸಿದ್ದು, ಇದು ರಾಜ್ಯಸಭೆಗೆ ಮಾಡಿದ ಅವಮಾನ ಎಂದಿದ್ದಾರೆ.

ನಿನ್ನೆ ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯ ಮಂಡಿಸಿದ ಪ್ರಧಾನಿ ಮೋದಿ ಇಂದು ರಾಜ್ಯಸಭೆಯಲ್ಲಿ ಮಾತನಾಡಿದರು. ರಾಜ್ಯಸಭೆಯಲ್ಲೂ ಅವರ ಭಾಷಣಕ್ಕೆ ವಿಪಕ್ಷಗಳಿಂದ ವಿರೋಧ ವ್ಯಕ್ತವಾಯಿತು. ಮೋದಿ ಭಾಷಣ ಮಾಡುತ್ತಿದ್ದಂತೇ ಘೋಷಣೆ ಕೂಗುತ್ತಾ ವಿಪಕ್ಷ ಸದಸ್ಯರು ಎದ್ದು ಹೋದರು.

ಇದಕ್ಕೆ ತಿರುಗೇಟು ನೀಡಿದ ಪ್ರಧಾನಿ ಮೋದಿ ‘ಸುಳ್ಳು ಹರಡುತ್ತಿರುವವರನ್ನು ದೇಶ ಗಮನಿಸುತ್ತಿದೆ. ಸತ್ಯ ಕೇಳಲು ದೈರ್ಯ ಬೇಕು. ಇದೇ ಸಭೆಯಲ್ಲಿ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೇಳಲು ಅವರಿಗೆ ಧೈರ್ಯವೇ ಇಲ್ಲ. ಅವರು ಈ ರಾಜ್ಯಸಭೆಗೇ ಅವಮಾನ ಮಾಡುತ್ತಿದ್ದಾರೆ. ರಾಜ್ಯಸಭೆಯ ಗತವೈಭವಕ್ಕೆ ಅವಮಾನ ಮಾಡುತ್ತಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ನಮ್ಮ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಮಾತನಾಡಲು ಅವಕಾಶ ಕೊಡಲಿಲ್ಲ ಎಂದು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವರು. ಮೋದಿ ಭಾಷಣಕ್ಕೆ ಅಡ್ಡಿಪಡಿಸಿದ ವಿಪಕ್ಷ ಸದಸ್ಯರ ವರ್ತನೆಗೆ ಸ್ಪೀಕರ್ ಜಗದೀಪ್ ಧನ್ಕರ್ ಆಕ್ಷೇಪ ವ್ಯಕ್ತಪಡಿಸಿದರು.  ಪ್ರಧಾನಿ ಮಾತನ್ನು ಕೇಳುವ ವ್ಯವಧಾನವೂ ಇಲ್ಲದೇ ರಾಜ್ಯಸಭೆಯ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆಕ್ಷೇಪ ಹೊರಹಾಕಿದರು.

ಸಂವಿಧಾನ ಲೈಟ್ ಹೌಸ್ ನಂತೆ: ಮೋದಿ
ಇನ್ನು, ತಮ್ಮ ಭಾಷಣದಲ್ಲಿ ಸಂವಿಧಾನಕ್ಕೆ ಬೆಲೆ ಕೊಡುತ್ತಿಲ್ಲ ಎಂಬ ವಿಪಕ್ಷ ನಾಯಕರ ಆರೋಪಕ್ಕೆ ಮೋದಿ ತಿರುಗೇಟು ನೀಡಿದರು. ಸಂವಿಧಾನ ನಮಗೆ ಲೈಟ್ ಹೌಸ್ ಇದ್ದಂತೆ. ಸಂವಿಧಾನ ಇರುವುದಕ್ಕೇ ನಾನು ಇಂದು ಇಲ್ಲಿದ್ದೇನೆ. ಸಂವಿಧಾನವು ದೀಪಸ್ತಂಬದಂತೆ ನಮಗೆ ಮಾರ್ಗದರ್ಶನ ಮಾಡುತ್ತಿದೆ. ಈಗ ಇಲ್ಲಿ ಸಂವಿಧಾನವನ್ನು ತೋರಿಸುತ್ತಿರುವವರು ಹಿಂದೆ ಅದನ್ನು ವಿರೋಧಿಸಿದವರು ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments