Webdunia - Bharat's app for daily news and videos

Install App

ನಿನ್ನೆ ಪ್ಯಾಲೆಸ್ತೀನ್ ಪರ, ಇಂದು ಬಾಂಗ್ಲಾದೇಶ ಹಿಂದೂ ಪರ ಪ್ರಿಯಾಂಕ ಗಾಂಧಿ ವಾದ್ರಾ ಹೋರಾಟ

Krishnaveni K
ಮಂಗಳವಾರ, 17 ಡಿಸೆಂಬರ್ 2024 (12:32 IST)
Photo Credit: X
ನವದೆಹಲಿ: ಬಾಂಗ್ಲಾದೇಶದಲ್ಲಿ ಇತ್ತೀಚೆಗೆ ಅಲ್ಪ ಸಂಖ್ಯಾತ ಹಿಂದೂಗಳ ಮೇಲಾಗುತ್ತಿರುವ ಹಿಂಸಾಚಾರ ಖಂಡಿಸಿ ಇಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ನೇತೃತ್ವದಲ್ಲಿ ವಿಪಕ್ಷ ಸಂಸದರು ಸಂಸತ್ ಭವನದ ಮುಂಭಾಗ ಪ್ರತಿಭಟನೆ ನಡೆಸಿದರು.

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಅಧಿಕಾರ ಕಳೆದುಕೊಂಡ ಬಳಿಕ ಹಿಂದೂಗಳ ಸ್ಥಿತಿ ಶೋಚನೀಯವಾಗಿದೆ. ಸಿಕ್ಕ ಸಿಕ್ಕಲ್ಲಿ ಹಿಂದೂಗಳ ಮೇಲೆ ದಾಳಿಯಾಗುತ್ತಿದೆ. ಕೆಲವೆಡೆ ಹಿಂದೂ ದೇವಾಲಯಗಳನ್ನೂ ಧ್ವಂಸ ಮಾಡುವ ಕೆಲಸ ಮಾಡಲಾಗುತ್ತಿದೆ. ಆದರೆ ಹಿಂದೂಗಳು ಎಷ್ಟೇ ಮನವಿ ಮಾಡಿಕೊಂಡರೂ ಈ ಬಗ್ಗೆ ಸರ್ಕಾರ ಕಿಂಚಿತ್ತೂ ಗಮನಹರಿಸುತ್ತಿಲ್ಲ.

ಇತ್ತೀಚೆಗೆ ಇಸ್ಕಾನ್ ಸಂಸ್ಥೆಯ ಮುಖ್ಯಸ್ಥರನ್ನೂ ಬಂಧಿಸಲಾಗಿತ್ತು. ಅವರ ಪರ ವಕೀಲರಾಗಿ ಕೋರ್ಟ್ ಗೆ ಹೋಗಬೇಕಾಗಿದ್ದ ವಕೀಲರನ್ನು ಕೊಲೆ ಮಾಡಲಾಗಿತ್ತು. ಒಟ್ಟಿನಲ್ಲಿ ಬಾಂಗ್ಲಾದೇಶದಲ್ಲಿ ಹಿಂದೂಗಳು ಭಯದಲ್ಲೇ ಬದುಕುವ ವಾತಾವವಣವಿದೆ. ಈ ಬಗ್ಗೆ ನಿನ್ನೆಯಷ್ಟೇ ಸಂಸತ್ ನಲ್ಲಿ ಪ್ರಿಯಾಂಕ ವಾದ್ರಾ ಪ್ರಸ್ತಾಪಿಸಿದ್ದರು.

ಕೇಂದ್ರ ಸರ್ಕಾರ ಬಾಂಗ್ಲಾದೇಶದಲ್ಲಿನ ಹಿಂದೂಗಳ ಬಗ್ಗೆ ಧ್ವನಿಯೆತ್ತಬೇಕು ಎಂದಿದ್ದರು. ಇಂದು ವಿಪಕ್ಷ ಸಂಸದರೊಂದಿಗೆ ಭಿತ್ತಿಪತ್ರ ಹಿಡಿದು ಸಂಸತ್ ಮುಂಭಾಗ ಪ್ರತಿಭಟನೆ ನಡೆಸಿದ್ದಾರೆ. ಬಾಂಗ್ಲಾದೇಶದಲ್ಲಿನ ಹಿಂದೂಗಳ ನೆರವಿಗೆ ನಿಲ್ಲುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments