Publish Date: Thu, 20 Oct 2022 (12:50 IST)
Updated Date: Thu, 20 Oct 2022 (12:53 IST)
ಮುಂಬೈ : ನಿಷೇಧಿತ ಪಿಎಫ್ಐ ಸಂಘಟನೆ ಕುರಿತಂತೆ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲಾಗುತ್ತಿವೆ.
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು ಧ್ವಂಸ ಮಾಡಲು ಪಿಎಫ್ಐ ಷಡ್ಯಂತ್ರ ರೂಪಿಸಿತ್ತು ಎಂಬುದನ್ನು ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ (ಎಟಿಎಸ್) ಬಹಿರಂಗಪಡಿಸಿದೆ.
ರಾಮಮಂದಿರ ಧ್ವಂಸ ಮಾಡಿ ಅದರ ಜಾಗದಲ್ಲಿ ಬಾಬ್ರಿ ಮಸೀದಿ ನಿರ್ಮಿಸಲು ಪಿಎಫ್ಐ ಪ್ಲಾನ್ ಮಾಡಿತ್ತು. ಅಷ್ಟೇ ಅಲ್ಲದೇ 2047ರ ವೇಳೆಗೆ ವೇಳೆಗೆ ಭಾರತವನ್ನು ಇಸ್ಲಾಮಿಕ್ ದೇಶವನ್ನಾಗಿ ಮಾಡಲು ಅವರು ಯೋಜಿಸಿದ್ದರು ಎನ್ನಲಾಗಿದೆ.
ಮೂಲಗಳ ಪ್ರಕಾರ ಎಟಿಎಸ್ ಇತ್ತೀಚೆಗೆ ಮಹಾರಾಷ್ಟ್ರದ ಮಾಲೆಗಾಂವ್, ಪುಣೆ ಮತ್ತು ಇತರ ಪ್ರದೇಶಗಳಿಂದ ಐವರು ಪಿಎಫ್ಐ ಜಿಹಾದಿಗಳನ್ನು ಬಂಧಿಸಿದೆ.