Webdunia - Bharat's app for daily news and videos

Install App

ಮನರಂಜನೆಗಾಗಿ ಬಡವರ ಮನೆಯಲ್ಲಿ ಫೋಟೊಶೂಟ್‌: ರಾಹುಲ್‌ಗೆ ಕುಟುಕಿದ ಪ್ರಧಾನಿ ಮೋದಿ

Sampriya
ಮಂಗಳವಾರ, 4 ಫೆಬ್ರವರಿ 2025 (18:37 IST)

ನವದೆಹಲಿ: ಕೆಲವರು ಬಡವರ  ಮನೆಯಲ್ಲಿ ಫೋಟೋಶೂಟ್‌  ಮಾಡಿಸಿ ಮನರಂಜನೆ ಪಡೀತಾರೆ. ಅವರಿಗೆ ಬಡವರ ಮಾತುಗಳು ಬೋರ್‌ ಆಗಲಿದೆ. ಆದರೆ, ಬಡವರ  ಸಿಟ್ಟನ್ನು ಅರ್ಥ ಮಾಡಿಕೊಳ್ಳಬಲ್ಲೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುವ ಮೂಲಕ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಕುಟುಕಿದರು.

ನಾವು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಾವು ಬಯಸುತ್ತೇವೆ. ನಮ್ಮ ದೇಶದಲ್ಲಿ ಪ್ರಧಾನ ಮಂತ್ರಿ ಇದ್ದರು. ಅವರನ್ನು ಮಿಸ್ಟರ್ ಕ್ಲೀನ್ ಎಂದು ಕರೆಯಲಾಗುತ್ತಿತ್ತು. ಒಂದು ರೂಪಾಯಿ ಬಿಡುಗಡೆ ಮಾಡಿದರೆ ಬಡವರಿಗೆ 15 ಪೈಸೆ ತಲುಪುತ್ತದೆ ಎಂದು ಹೇಳಿದ್ದರು. ಎಲ್ಲಾ ಕಡೆ ಅವರದ್ದೇ ಸರ್ಕಾರ ಇದ್ದರೂ ಈ ಹೇಳಿಕೆ ನೀಡಿದ್ದರು. ಬಾಕಿ ಹಣ ಎಲ್ಲಿ ಹೋಗುತ್ತಿತ್ತು ಜನರಿಗೆ ಗೊತ್ತಿದೆ. ಉಳಿತಾಯ ಮತ್ತು ಅಭಿವೃದ್ಧಿಯೇ ನಮ್ಮ ಧ್ಯೇಯ ಎಂದು ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಚರ್ಚೆಯಲ್ಲಿ ಮೋದಿ ಮಾತನಾಡಿದರು.

ಬಡವರಿಗೆ ಸುಳ್ಳಿನ ಘೋಷಣೆ ಅಲ್ಲ, ಸತ್ಯವಾದ ಅಭಿವೃದ್ಧಿ ನೀಡಿದ್ದೇವೆ. ಮಧ್ಯಮ ವರ್ಗದ ಕನಸು ಈಡೇರಿಸಿದ್ದೇವೆ. ಬಡವರಿಗೆ ಈವರೆಗೂ ನಾಲ್ಕು ಕೋಟಿ ಮನೆ ಸಿಕ್ಕಿದೆ. ಕಷ್ಟ ಅನುಭವಿಸಿದರಿಗೆ ಪಕ್ಕಾ ಮನೆಯ ಬೆಲೆ ಏನು ಗೊತ್ತಾಗುತ್ತದೆ. ಮಹಿಳೆಯರಿಗಾಗಿ 12 ಕೋಟಿಗೂ ಅಧಿಕ ಶೌಚಾಲಯ ನಿರ್ಮಾಣ ಮಾಡಿದ್ದೇವೆ ಎಂದರು.

ಪ್ರತಿ ಮನೆಗೆ ಕುಡಿಯುವ ನೀರು ನೀಡುವುದು ನಮ್ಮ ಉದ್ದೇಶ. ಜಲ ಜೀವನ್ ಮಿಷನ್ ಅಡಿ 12 ಕುಟುಂಬಗಳಿಗೆ ಕುಡಿಯುವ ನೀರು ನೀಡಿದ್ದೇವೆ ಎಂದು ಸರ್ಕಾರದ ಸಾಧನೆ ತಿಳಿಸಿದರು.  

ದೇಶದ ಜನರು ಹತ್ತು ವರ್ಷದಿಂದ ಸೇವೆ ಮಾಡಲು ಅವಕಾಶ ನೀಡಿದ್ದಾರೆ. 25 ಕೋಟಿ ಜನರು ಬಡತನ ರೇಖೆಯಿಂದ ಹೊರ ಬಂದಿದ್ದಾರೆ. ಈ ಹಿಂದೆ ಗರೀಬಿ ಹಠಾವೋ ಘೋಷಣೆ ಮಾಡಿದವರು ಬಡತನ ನಿರ್ಮೂಲನೆ ಮಾಡಲಿಲ್ಲ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments