Webdunia - Bharat's app for daily news and videos

Install App

ಅಭಿವೃದ್ಧಿಗೆ ಮತ ಹಾಕಿ ಎಂದ ರಶ್ಮಿಕಾ ಮಂದಣ್ಣ ಮೆಸೇಜ್ ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

Krishnaveni K
ಶುಕ್ರವಾರ, 17 ಮೇ 2024 (10:49 IST)
Photo Courtesy: Twitter
ನವದೆಹಲಿ: ಕಳೆದ 10 ವರ್ಷಗಳಲ್ಲಿ ದೇಶ ಸಾಕಷ್ಟು ಅಭಿವೃದ್ಧಿ ಕಂಡಿದೆ. ಅಭಿವೃದ್ಧಿಗೆ ಮತ ನೀಡಿ ಎಂದು ರಶ್ಮಿಕಾ ಮಂದಣ್ಣ ನೀಡಿದ್ದ ಸಂದೇಶ ಈಗ ಪ್ರಧಾನಿ ಮೋದಿ ಗಮನಸೆಳೆದಿದೆ.

ರಶ್ಮಿಕಾ ಟ್ವೀಟ್ ನ್ನು ರಿಟ್ವೀಟ್ ಮಾಡಿರುವ ಮೋದಿ ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಭಾರತ ದೊಡ್ಡದಾಗಿ ಕನಸು ಕಾಣಲು ಸಾಧ‍್ಯವಿಲ್ಲ ಎನ್ನುತ್ತಿದ್ದಾರೆ. ಆದರೆ ಈ ಅಟಲ್ ಸೇತುವೆಯನ್ನು ಕೇವಲ ಏಳೆಂಟು ವರ್ಷಗಳಲ್ಲಿ ನಿರ್ಮಾಣ ಮಾಡಲಾಗಿದೆ. ಇದರಿಂದ ಪ್ರಯಾಣದ ಅವಧಿ 20 ನಿಮಿಷಕ್ಕೆ ಇಳಿದಿದೆ. ಯುವ ಭಾರತಕ್ಕೆ ಇದೇ ಗ್ಯಾರಂಟಿ. ಈ ರೀತಿಯ ನೂರಾರು ಅಟಲ್ ಸೇತುವೆ ನಿರ್ಮಾಣವಾಗಬೇಕು ಎಂದರೆ ಅಭಿವೃದ್ಧಿಗೆ ಮತ ಹಾಕಿ’ ಎಂದು ರಶ್ಮಿಕಾ ಟ್ವೀಟ್ ಮಾಡಿದ್ದರು.

ಅವರ ಟ್ವೀಟ್ ಪ್ರಧಾನಿ ಮೋದಿಯನ್ನೂ ತಲುಪಿದೆ. ರಶ್ಮಿಕಾ ಟ್ವೀಟ್ ನ್ನು ರಿಟ್ವೀಟ್ ಮಾಡಿರುವ ಮೋದಿ ‘ಖಂಡಿತಾ ಜನರ ಸಂಪರ್ಕ ಮತ್ತು ಪ್ರಯಾಣ ಸುಧಾರಿಸುವುದಕ್ಕಿಂತ ತೃಪ್ತಿಕರ ಕೆಲಸ ಮತ್ತೊಂದಿಲ್ಲ’ ಎಂದು ಪ್ರತಿಕ್ರಿಯಿಸಿದ್ದಾರೆ. ಮೋದಿ ಮಾಡಿರುವ ಈ ಟ್ವೀಟ್ ಎಲ್ಲರ ಗಮನ ಸೆಳೆದಿದೆ.

ಅಟಲ್ ಸೇತು ಭಾರತದ ಅತ್ಯಂತ ಉದ್ದನೆಯ ಸಮುದ್ರ ಸೇತುವೆಯಾಗಿದೆ. ಇದು ಮುಂಬೈ ಮತ್ತು ನವಿ ಮುಂಬೈ ನಡುವೆ ಸಂಪರ್ಕ ಸಾಧಿಸುತ್ತದೆ. ಮೊದಲು ಈ ಎರಡೂ ಸ್ಥಳಗಳ ನಡುವಿನ ದೂರ ಎರಡೂವರೆ ಗಂಟೆಗಳಾಗಿತ್ತು. ಆದರೆ ಈಗ ಕೇವಲ 20 ನಿಮಿಷ ಸಾಕಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments