ಮೋದಿ ಮಣಿಪುರಕ್ಕೆ ಭೇಟಿ ಕೊಡ್ಲಿ ನೋಡೋಣ ಎನ್ನುತ್ತಿದ್ದ ಕಾಂಗ್ರೆಸ್ ನಾಯಕರು: ಇಂದು ಪ್ರಧಾನಿ ಭೇಟಿ

Krishnaveni K
ಶನಿವಾರ, 13 ಸೆಪ್ಟಂಬರ್ 2025 (08:53 IST)
ನವದೆಹಲಿ: ಮೋದಿ ಮೊದಲು ಹಿಂಸಾಚಾರಕ್ಕೊಳಗಾಗಿರುವ ಮಣಿಪುರಕ್ಕೆ ಭೇಟಿ ಕೊಡಲಿ ಎಂದು ಕಾಂಗ್ರೆಸ್ ನಾಯಕರು ಇಷ್ಟು ದಿನ ಸವಾಲು ಹಾಕುತ್ತಲೇ ಇದ್ದರು. ಇಂದು ಪ್ರಧಾನಿ ಮೋದಿ ಕೊನೆಗೂ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ.

2023 ರಿಂದ ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ಸಂಘರ್ಷ ನಡೆಯುತ್ತಲೇ ಇತ್ತು. ಇತ್ತೀಚೆಗಷ್ಟೇ ಇಲ್ಲಿ ಪರಿಸ್ಥಿತಿ ತಕ್ಕಮಟ್ಟಿಗೆ ಸುಧಾರಣೆಯಾಗಿತ್ತು. ಮಣಿಪುರದ ಪರಿಸ್ಥಿತಿ ವಿಪಕ್ಷಗಳಿಗೆ ಕೇಂದ್ರದ ವಿರುದ್ಧ ಟೀಕಾ ಪ್ರಹಾರ ನಡೆಸಲು ಒಂದು ಅಸ್ತ್ರವಾಗಿತ್ತು.

ಅದರಲ್ಲೂ ಇದುವರೆಗೆ ಪ್ರಧಾನಿ ಮೋದಿ ಇಲ್ಲಿಗೆ ಭೇಟಿ ನೀಡಿಲ್ಲ ಎಂಬುದನ್ನೇ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಶ್ನೆ ಮಾಡುತ್ತಲೇ ಇದ್ದರು. ದೇಶದ ಬೇರೆ ಎಲ್ಲಾ ಕಡೆ ಹೋಗಲು ಮೋದಿಗೆ ಸಮಯವಿದೆ. ಆದರೆ ಹಿಂಸಾಚಾರಕ್ಕೊಳಗಾದ ಮಣಿಪುರಕ್ಕೆ ಭೇಟಿ ನೀಡಲು ಸಮಯವಿಲ್ಲ ಎನ್ನುತ್ತಿದ್ದರು.

ಇದೀಗ ಕೊನೆಗೂ ಮೋದಿ ಮಣಿಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಇಂದು ಮಣಿಪುರಕ್ಕೆ ಭೇಟಿ ನೀಡಲಿರುವ ಮೋದಿ ಸಾವಿರಾರು ಕೋಟಿ ರೂ.ಗಳ ಯೋಜನೆಗೂ ಚಾಲನೆ ನೀಡಲಿದ್ದಾರೆ. ಈ ಮೂಲಕ ವಿಪಕ್ಷಗಳ ಟೀಕೆಗಳನ್ನು ಬಂದ್ ಮಾಡುವ ಪ್ರಯತ್ನ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments