Webdunia - Bharat's app for daily news and videos

Install App

ನಕಲಿ ದಾಖಲೆಗೆ ಪೂಜಾ ಖೇಡ್ಕರ್ ತಲೆದಂಡ: ಸೇವೆಯಿಂದಲೇ ಕಿತ್ತೆಸೆದ ಕೇಂದ್ರ

Sampriya
ಭಾನುವಾರ, 8 ಸೆಪ್ಟಂಬರ್ 2024 (10:03 IST)
Photo Courtesy X
ನವದೆಹಲಿ: ವಿವಾದಿತ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರನ್ನು ಕೇಂದ್ರ ಸರ್ಕಾರವು ತಕ್ಷಣದಿಂದಲೇ ಜಾರಿಗೆ ಬರುವಂತೆ ಭಾರತೀಯ ಆಡಳಿತ ಸೇವೆಯಿಂದ ವಜಾಗೊಳಿಸಲಾಗಿದೆ.

ನಕಲಿ ದಾಖಲೆ ನೀಡಿದ ಆರೋಪದ ಮೇಲೆ ಪೂಜಾ ಖೇಡ್ಕರ್ ಅವರ ನೇಮಕಾತಿ ಆದೇಶವನ್ನು ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ರದ್ದುಗೊಳಿಸಿದ ತಿಂಗಳ ಬಳಿಕ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು.

ಪುಣೆಯಲ್ಲಿ ಪ್ರೊಬೇಷನರಿ ತರಬೇತಿಯಲ್ಲಿದ್ದ ವೇಳೆ ಪೂಜಾ ತಮ್ಮ ಅಧಿಕಾರ ಹಾಗೂ ಸವಲತ್ತುಗಳನ್ನು ದುರುಪಯೋಗಪಡಿಸಿಕೊಂಡಿದ್ದರು ಎಂದು ಸಹ ಆರೋಪಿಸಲಾಗಿದೆ.

ಜುಲೈನಲ್ಲಿ ಆಕೆಯ ವಿರುದ್ದ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಜುಲೈ 31ರಂದು ಆಕೆಯ ನೇಮಕಾತಿ ಆದೇಶವನ್ನು ಯುಪಿಎಸ್‌ಸಿ ರದ್ದುಗೊಳಿಸಿತ್ತು. ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಲಾಗಿತ್ತು.

ನಕಲಿ ಅಂಗವೈಕಲ್ಯ ವೈದ್ಯಕೀಯ ಪ್ರಮಾಣಪತ್ರ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಏಮ್ಸ್ ವೈದ್ಯಕೀಯ ಪರೀಕ್ಷೆಗೆ ಒಳಗಾಗಲು ನಾನು ತಯಾರಿದ್ದೇನೆ ಎಂದು ದೆಹಲಿ ಹೈಕೋರ್ಟ್‌ಗೆ ಪೂಜಾ ಖೇಡ್ಕರ್ ತಿಳಿಸಿದ್ದರು.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments