Webdunia - Bharat's app for daily news and videos

Install App

ವಯನಾಡಿನ ಭೀಕರ ಭೂಕುಸಿತದ ಭೀಕರತೆ ಕಂಡು ದಂಗಾದ ಪ್ರಧಾನಿ ನರೇಂದ್ರ ಮೋದಿ

Sampriya
ಶನಿವಾರ, 10 ಆಗಸ್ಟ್ 2024 (14:16 IST)
Photo Courtesy X
ವಯನಾಡು: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೇರಳದ ವಯನಾಡಿಗೆ ಭೇಟಿ ನೀಡಿ, ಭೀಕರ ಭೂಕುಸಿತದಿಂದ ತತ್ತರಿಸಿರುವ  ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ಕೈಗೊಂಡರು. ಈ ವೇಳೆ ದುರ್ಘಟನೆಯ ಭೀಕರತೆ ಕಂಡು ಪ್ರಧಾನಿ ದಂಗಾದರು.

ವಯನಾಡಿನಲ್ಲಿ ಈಚೆಗೆ ಸಂಭವಿಸಿದ ಭೂಕುಸಿತ ದುರಂತದಲ್ಲಿ 266ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಸಾವಿರಾರು ಕುಟುಂಬಗಳು ಬೀದಿಗೆ ಬಿದ್ದಿವೆ.

ಕೇರಳದ ಚೂರಲ್‌ಮಲ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಗ್ರಾಮಗಳಲ್ಲಿ ಮೋದಿ ಅವರು ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಕೇಂದ್ರ ಸಚಿವ, ಬಿಜೆಪಿ ‌ಸಂಸದ ಸುರೇಶ್ ಗೋಪಿ ಅವರು ಸಮೀಕ್ಷೆ ವೇಳೆ ಪ್ರಧಾನಿ ಅವರೊಂದಿಗೆ  ಇದ್ದರು.

ವೈಮಾನಿಕ ಸಮೀಕ್ಷೆ ನಂತರ ಕಲ್ಪೆಟ್ಟಾದಲ್ಲಿರುವ ಎಸ್‌ಕೆಎಂಜೆ ಹೈಯರ್ ಸೆಕೆಂಡರಿ ಶಾಲೆ ಸಮೀಪ ಹೆಲಿಕಾಪ್ಟರ್‌ ಬಂದಿಳಿಯಲಿದ್ದು, ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಕೆಲವು ಭೂಕುಸಿತ ಪೀಡಿತ ಪ್ರದೇಶಗಳಿಗೆ ತೆರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments