ಪ್ರತಿಭಟನೆ : ರೈಲುಗಳ ಸಂಚಾರ ರದ್ದು!

Webdunia
ಗುರುವಾರ, 16 ಜೂನ್ 2022 (15:26 IST)
ಪಾಟ್ನಾ : ಬಿಹಾರದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು ಹೆಚ್ಚಿದೆ. ಹಾಗಾಗಿ ಪೂರ್ವ ಮಧ್ಯ ರೈಲ್ವೇಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ.
 
ದೇಶದಲ್ಲಿರುವ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ `ಅಗ್ನಿಪಥ್’ ಅಲ್ಪಾವಧಿಯ ನೇಮಕಾತಿ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.

ನಿನ್ನೆಯಿಂದಲೂ ಪ್ರತಿಭಟನೆ ನಡೆಯುತ್ತಿದ್ದು, ಇಂದು ಬಿಹಾರದಲ್ಲಿ ನಡೆಯುತ್ತಿರುವ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಬಿಹಾರದ ಹಲವು ಭಾಗಗಳಲ್ಲಿ ರೈಲು ಮತ್ತು ವಾಹನ ಸಂಚಾರಕ್ಕೆ ಸೇನಾ ಆಕಾಂಕ್ಷಿಗಳು ಅಡ್ಡಿಪಡಿಸಿದ್ದಾರೆ.

ಭಭುವಾ ರೋಡ್ ರೈಲ್ವೇ ನಿಲ್ದಾಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಇಂಟರ್ಸಿಟಿ ಎಕ್ಸ್ಪ್ರೆಸ್ ರೈಲಿನ ಗಾಜಿನ ಕಿಟಕಿಗಳನ್ನು ಲಾಠಿಗಳಿಂದ ಒಡೆದು ಹಾಕಿದ್ದು, ರೈಲಿನ ಒಂದು ಕೋಚ್ಗೆ ಬೆಂಕಿ ಹಚ್ಚಿದ್ದಾರೆ.

ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದುಕೊಂಡಿರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಜೊತೆಗೆ 5 ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಿ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದೆ. ಪ್ರತಿಭಟನೆಯಿಂದಾಗಿ ಬಿಹಾರದಲ್ಲಿ ಸಂಚರಿಸುತ್ತಿದ್ದ 29 ರೈಲುಗಳ ಮೇಲೆ ಪರಿಣಾಮ ಬೀರಿದೆ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಶಾಲೆ ಪುನರಾಂಭವಾಗಿ 18ದಿನಗಳಾದರೂ ದಕ್ಷಿಣ ಕನ್ನಡದ 20ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

Karnataka MLC Election, ಅಡ್ಡಮತದಾನದ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟ ಬಿ.ವೈ. ವಿಜಯೇಂದ್ರ

ಮುಂದಿನ ಸುದ್ದಿ
Show comments