Webdunia - Bharat's app for daily news and videos

Install App

ನಕಲಿ ವೀಸಾ ಕೊಟ್ಟು ವಂಚಿಸುತ್ತಿದ್ದ ಖತರ್ನಾಕ್ ಕಳ್ಳ

Webdunia
ಗುರುವಾರ, 2 ಸೆಪ್ಟಂಬರ್ 2021 (11:16 IST)
ಬೆಂಗಳೂರು: ನಕಲಿ ವೀಸಾ ತಯಾರಿಸಿಕೊಟ್ಟು ಜನರಿಗೆ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಖತರ್ನಾಕ್ ಆರೋಪಿಯೋರ್ವನನ್ನು ಹುಳಿಮಾವು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕೇರಳ ಮೂಲದ ನಿಪುಣ್ ಎಂದು ತಿಳಿದು ಬಂದಿದೆ. ಕೇವಲ ಪಿಯುಸಿ ಓದಿರುವ ಈತ ಫೇಸ್ ಬುಕ್ ಮೂಲಕ ಜನರನ್ನು ಸಂಪರ್ಕಿಸಿ ವೀಸಾ ತಯಾರಿಸಿಕೊಡಿಸುವುದಾಗಿ ಹೇಳಿ ವಾಟ್ಸಪ್ ಡೀಟೆಲ್ ಕಲೆಕ್ಟ್ ಮಾಡುತ್ತಿದ್ದ. ಬಳಿಕ ಹುಳಿಮಾವಿನ ತನ್ನ ಮನೆಯಲ್ಲಿಯೇ ನಕಲಿ ವೀಸಾ ತಯಾರಿಸಿ ವಾಟ್ಸಪ್ ನಲ್ಲಿ ನಕಲಿ ಪಿಡಿಎಫ್ ಕಳಿಹಿಸಿ ವಂಚಿಸುತ್ತಿದ್ದ.
ಒಂದು ವೀಸಾಗಾಗಿ 50,000 ರೂಪಾಯಿಯಿಂದ 2 ಲಕ್ಷದವರೆಗೂ ಒಬ್ಬರಿಗೆ ಹಣ ಪಡೆದು ಮೋಸ ಮಾಡುತ್ತಿದ್ದ. ಖಚಿತ ಮಾಹಿತಿ ಆದರಿಸಿ ಹುಳಿಮಾವಿನ ಬಳಿಯ ಆರೋಪಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ನಿಪುಣ್ ನನ್ನು ಬಂಧಿಸಿದ್ದಾರೆ.
ಆರೋಪಿ ನಿಪುಣ್ ಹೊರ ರಾಜ್ಯದ ವಿದ್ಯಾರ್ಥಿಗಳಿಗೆ ನಗರದ ವಿವಿಧ ಕಾಲೇಜ್ ಗಳಲ್ಲಿ ಸೀಟು ಕೊಡಿಸುವುದಾಗಿಯೂ ವಂಚಿಸುತ್ತಿದ್ದ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೈರಿ ರಾಜಕಾರಣಕ್ಕೆ ಕಾಲಿಟ್ಟ ಡಿಕೆ ಸುರೇಶ್‌: ನಾಮಪತ್ರ ಸಲ್ಲಿಕೆ

Jammu Kashmir: 11 ಸ್ಥಳಗಳ ಮೇಲೆ SIA ದಾಳಿ

ಆರತಕ್ಷತೆ ವೇಳೆ ಮಧುಮಗ ಕುಸಿದುಬಿದ್ದು ಸಾವು: ಮದುವೆ ಮನೆಯಲ್ಲಿ ಸೂತಕದ ಛಾಯೆ

ISRO: 101ನೇ ಉಪಗ್ರಹ ಉಡಾವಣೆಗೆ ಸಜ್ಜಾದ ಇಸ್ರೋ, ಇದರ ವಿಶೇಷ ಹೀಗಿದೆ

Bengaluru International Airport: ಆರಂಭದ ಬಳಿಕ ಮೊದಲ ಬಾರಿ ದಾಖಲೆಯ ಲಾಭ

ಮುಂದಿನ ಸುದ್ದಿ
Show comments