Webdunia - Bharat's app for daily news and videos

Install App

ತ್ರಿಶ್ಶೂರ್ ನಲ್ಲಿ ಮೋದಿ, ವಯನಾಡಿನಲ್ಲಿ ಇಂದು ರಾಹುಲ್ ಗಾಂಧಿ ಅಬ್ಬರ

Krishnaveni K
ಸೋಮವಾರ, 15 ಏಪ್ರಿಲ್ 2024 (11:24 IST)
Photo Courtesy: Twitter
ತಿರುವನಂತಪುರಂ: ಲೋಕಸಭೆ ಚುನಾವಣೆ ಪ್ರಚಾರಕ್ಕಾಗಿ ಇಂದು ಕೇರಳದಲ್ಲಿ ಪ್ರಧಾನಿ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ.

ನಿನ್ನೆ ಕರ್ನಾಟಕದಲ್ಲಿ ಮೋದಿ ಅಬ್ಬರದ ಪ್ರಚಾರ ನಡೆಸಿದ್ದರು. ಇಂದು ದಕ್ಷಿಣದ ಮತ್ತೊಂದು ರಾಜ್ಯ ಕೇರಳದಲ್ಲಿ ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಕೇರಳದ ತ್ರಿಶ್ಶೂರ್ ನಲ್ಲಿ ಮೋದಿ ಇಂದು ಪ್ರಚಾರ ನಡೆಸಲಿದ್ದಾರೆ. ಇಲ್ಲಿಂದ ನಟ, ಬಿಜೆಪಿ ನಾಯಕ ಸುರೇಶ್ ಗೋಪಿ ಕಣಕ್ಕಿಳಿಯುತ್ತಿದ್ದಾರೆ.

ಸುರೇಶ್ ಗೋಪಿಗೆ ಸಾಕಷ್ಟು ಜನ ಬೆಂಬಲವಿದೆ. ಹೀಗಾಗಿ ಅವರು ಗೆಲ್ಲಬಹುದು ಎಂಬ ಭರವಸೆ ಬಿಜೆಪಿಯಲ್ಲಿದೆ. ಇದಕ್ಕೆ ಮೊದಲು ಸುರೇಶ್ ಗೋಪಿ ಮಗಳ ಮದುವೆಯಲ್ಲೂ ಮೋದಿ ಪಾಲ್ಗೊಂಡಿದ್ದರು. ಇದೀಗ ಅವರ ಪರವಾಗಿ ಪ್ರಚಾರ ನಡೆಸಲು ದೇವರ ನಾಡಿಗೆ ಬರಲಿದ್ದಾರೆ.

ಇನ್ನೊಂದೆಡೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡಾ ಇಂದು ವಯನಾಡಿನಲ್ಲಿ ಪ್ರಚಾರ ನಡೆಸಲಿದ್ದಾರೆ. ರಾಹುಲ್ ವಯನಾಡಿನ ಹಾಲಿ ಸಂಸದ ಕೂಡಾ. ಈ ಬಾರಿಯೂ ಮತ್ತೊಮ್ಮೆ ಇಲ್ಲಿಂದಲೇ ಸ್ಪರ್ಧೆ ನಡೆಸುತ್ತಿದ್ದಾರೆ. ಹೀಗಾಗಿ ವಯನಾಡಿನಲ್ಲಿ ಇಂದು ಹಲವು ಕಾರ್ಯಕ್ರಮಗಳಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments