Webdunia - Bharat's app for daily news and videos

Install App

ನನಗೆ ಮೋದಿ ಥರಾ ದೇವರು ಸೂಚನೆ ಕೊಡ್ತಿಲ್ಲಪ್ಪಾ..: ರಾಹುಲ್ ಗಾಂಧಿ

Krishnaveni K
ಬುಧವಾರ, 12 ಜೂನ್ 2024 (15:43 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ರಾಯ್ ಬರೇಲಿ ಮತ್ತು ವಯನಾಡಿನಲ್ಲಿ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಗೆದ್ದ ರಾಹುಲ್ ಗಾಂಧಿ ಈಗ ಒಂದು ಕ್ಷೇತ್ರವನ್ನು ಬಿಟ್ಟು ಇನ್ನೊಂದನ್ನು ಆಯ್ಕೆ ಮಾಡುವ ಸಂದಿಗ್ಧದಲ್ಲಿದ್ದಾರೆ.

ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಅವರು ನನಗೆ ಗೊತ್ತಾಗುತ್ತಿಲ್ಲಪ್ಪ.. ನನಗೆ ನರೇಂದ್ರ ಮೋದಿ ಥರಾ ದೇವರು ಏನೂ ಸೂಚನೆ ಕೊಡುತ್ತಿಲ್ಲ ಎಂದು ವ್ಯಂಗ್ಯ ಮಾಡಿದ್ದಾರೆ. ಮಲಪ್ಪುರದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಪ್ರಧಾನಿ ಮೋದಿಯ ಈ ಹಿಂದಿನ ಹೇಳಿಕೆಗೆ ಈ ರೀತಿ ಟಾಂಗ್ ಕೊಟ್ಟಿದ್ದಾರೆ.

ಚುನಾವಣೆ ವೇಳೆ ಮೋದಿ ನನಗೆ ವಾರಣಾಸಿಯಿಂದ ಸ್ಪರ್ಧಿಸಲು ದೇವರೇ ಸೂಚನೆ ಕೊಟ್ಟಿದ್ದಾನೆ ಎಂದಿದ್ದರು. ಅದಕ್ಕೇ ಈಗ ರಾಹುಲ್ ಟಾಂಗ್ ಕೊಟ್ಟಿದ್ದಾರೆ. ‘ನನ್ನ ಮುಂದೆ ರಾಯ್ ಬರೇಲಿ ಆಯ್ಕೆ ಮಾಡಲೋ, ವಯನಾಡನ್ನು ಆಯ್ಕೆ ಮಾಡಲು ಎಂಬ ಗೊಂದಲಗಳಿವೆ. ದುರದೃಷ್ಟವಶಾತ್ ನನಗೆ ನರೇಂದ್ರ ಮೋದಿ ಥರಾ ದೇವರು ಸೂಚನೆ ಕೊಡುತ್ತಿಲ್ಲ. ಯಾಕೆಂದರೆ ನಾನೊಬ್ಬ ಸಾಮಾನ್ಯ ಮನುಷ್ಯ’ ಎಂದು ಲೇವಡಿ ಮಾಡಿದ್ದಾರೆ.

ಮೋದಿ ಈ ಹಿಂದೆ ಸಂದರ್ಶನವೊಂದರಲ್ಲಿ ನನ್ನನ್ನು ದೇವರೇ ಜನ ಸೇವೆ ಮಾಡಲು ಕಳುಹಿಸಿದ್ದಾನೆ ಎಂದು ಅನಿಸುತ್ತಿದೆ. ನನಗೆ ದೇವರೇ ಕೆಲಸ ಮಾಡುವ ಶಕ್ತಿ ಕೊಡುತ್ತಿದ್ದಾನೆ ಎನಿಸುತ್ತಿದೆ ಎಂದಿದ್ದರು. ಅವರ ಈ ಹೇಳಿಕೆಯನ್ನೇ ರಾಹುಲ್ ಗಾಂಧಿ ಈಗ ಈ ರೀತಿ ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

ಮುಂದಿನ ಸುದ್ದಿ
Show comments