Publish Date: Sat, 03 Oct 2020 (21:46 IST)
Updated Date: Sat, 03 Oct 2020 (21:48 IST)
ಪೊಲೀಸರಿಂದ ಹಲ್ಲೆಗೊಳಗಾಗಿ ನೂಕಾಟದಲ್ಲಿ ನೆಲಕ್ಕೆ ಬಿದ್ದಿದ್ದ ಸಂಸದ ರಾಹುಲ್ ಗಾಂಧಿ ಕೊನೆಗೂ ಹತ್ರಾಸ್ ಗೆ ಭೇಟಿ ನೀಡಿದ್ದಾರೆ.
ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್ ಗಾಂಧಿ ಯವರು ಹತ್ರಾಸ್ ಘಟನೆ ಸಂತ್ರಸ್ತೆಯ ಮನೆ ಭೇಟಿಗೆ ಉತ್ತರ ಪ್ರದೇಶದ ಪೊಲೀಸರು ತಡೆಯೊಡ್ಡಿದ್ದು, ನೂಕಾಟದಲ್ಲಿ ರಾಹುಲ್ ಗಾಂಧಿ ನೆಲಕ್ಕೆ ಬಿದ್ದಿದ್ದರು. ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದರು.
ಈ ಘಟನೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಇದೀಗ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಹತ್ರಾಸ್ ಘಟನೆ ಸಂತ್ರಸ್ತೆಯ ಕುಟುಂಬಸ್ಥರನ್ನ ಭೇಟಿಯಾಗಿ ಸಾಂತ್ವಾನ ಹೇಳಿದ್ದಾರೆ.