Webdunia - Bharat's app for daily news and videos

Install App

ಪಾಕಿಸ್ತಾನಕ್ಕೆ ನುಗ್ಗಿ ಹೊಡಿತೀವಿ: ಎಚ್ಚರಿಕೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

Krishnaveni K
ಶನಿವಾರ, 6 ಏಪ್ರಿಲ್ 2024 (09:23 IST)
Photo Courtesy: Twitter
ನವದೆಹಲಿ: ಭಾರತದ ಬಗ್ಗೆ ಬ್ರಿಟಿಷ್ ಪತ್ರಿಕೆಯೊಂದು ಮಾಡಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭಾರತದ ತಂಟೆಗೆ ಬಂದರೆ ಭಯೋತ್ಪಾದಕರನ್ನ ನುಗ್ಗಿ ಹೊಡೆಯುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇತ್ತೀಚೆಗೆ ದಿ ಗಾರ್ಡಿಯನ್ ಪತ್ರಿಕೆ ಭಾರತ 2020 ರ ನಂತರ ಇಲ್ಲಿಯವರೆಗೆ ಭಯೋತ್ಪಾದಕರ ನೆಪದಲ್ಲಿ ಪಾಕಿಸ್ತಾನ 20 ನಾಗರಿಕರನ್ನು ಕೊಂದಿದೆ ಎಂದು ವರದಿ ಮಾಡಿತ್ತು. ಈ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ರಾಜನಾಥ್ ಸಿಂಗ್, ಇದೆಲ್ಲಾ ಸುಳ್ಳು ಸುದ್ದಿಗಳು ಎಂದಿದ್ದಾರೆ.

‘ಪತ್ರಿಕೆಯಲ್ಲಿ ಬಂದ ವರದಿಗಳು ಸುಳ್ಳು ಮತ್ತು ಭಾರತ ವಿರೋಧಿ ಧೋರಣೆಯನ್ನು ಹೊಂದಿದೆ. ಇನ್ನೊಂದು ದೇಶದ ನಾಗರಿಕರನ್ನು ಕೊಲ್ಲುವುದು ನಮ್ಮ ವಿದೇಶಾಂತ್ ನೀತಿಯೇ ಅಲ್ಲ. ಆದರೆ ನೆರೆಯ ರಾಷ್ಟ್ರದ ಭಯೋತ್ಪಾದಕರು ನಮ್ಮಲ್ಲಿ ಭಯೋತ್ಪಾದನಾ ಕೃತ್ಯ ನಡೆಸಿದರೆ ಅದಕ್ಕೆ ತಕ್ಕ ಉತ್ತರ ಸಿಗುತ್ತದೆ. ಒಂದು ವೇಳೆ ಕಾರ್ಯಾಚರಣೆ ವೇಳೆ ಪಾಕಿಸ್ತಾನದತ್ತ ಓಡಿದರೆ ನುಗ್ಗಿ ಹೊಡೆಯುತ್ತೇವೆ’ ಎಂದಿದ್ದಾರೆ.

ಇನ್ನೂ ಮುಂದುವರಿದು, ‘ಭಾರತ ಯಾವತ್ತೂ ತಾನಾಗಿಯೇ ಇನ್ನೊಂದು ರಾಷ್ಟ್ರದ ಮೇಲೆ ದಾಳಿ ನಡೆಸಿಲ್ಲ. ನಮ್ಮ ಇತಿಹಾಸ ಗಮನಿಸಿದರೆ ಗೊತ್ತಾಗುತ್ತದೆ. ಆದರೆ ನಮ್ಮನ್ನು ಕೆಣಕಲು ಬಂದರೆ ಅವರನ್ನು ಸುಮ್ಮನೇ ಬಿಡುವ ಜಾಯಮಾನದವರಲ್ಲ’ ಎಂದು ರಾಜನಾಥ್ ಸಿಂಗ್ ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments