Webdunia - Bharat's app for daily news and videos

Install App

ಬಸ್‌ನಲ್ಲಿ ಮಹಿಳೆಯ ರೇಪ್‌: ಶಿರೂರಿನಲ್ಲಿ ಪೊಲೀಸರು ಬೀಸಿದ ಬಲೆಗೆ ಬಿದ್ದ ಕಾಮಕ

Sampriya
ಶುಕ್ರವಾರ, 28 ಫೆಬ್ರವರಿ 2025 (10:28 IST)
ಮುಂಬೈ: ನಿಂತಿದ್ದ ಬಸ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ದತ್ತಾತ್ರಯ ರಾಮದಾಸ್ ಗಾಡೆ (36) ಎಂಬಾತ ಕೊನೆಗೂ ಪೊಲೀಸ್‌ ಬಲೆಗೆ ಬಿದ್ದಿದ್ದಾನೆ

ಪುಣೆಯ ಸ್ವಾರ್‌ಗೇಟ್ ಬಸ್ ಡಿಪೋದಲ್ಲಿ 26 ವರ್ಷದ ಮಹಿಳೆಯ ಮೇಲೆ ರಾಮ್‌ದಾಸ್‌ ಎರಗಿದ್ದ.  ಆತನನ್ನು ಶಿರೂರು ತಹಸಿಲ್‌ನಲ್ಲಿ ಗುರುವಾರ ಮಧ್ಯರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಪತ್ತೆಗೆ ಪುಣೆ ಪೊಲೀಸರು ಡ್ರೋನ್‌ಗಳು ಮತ್ತು ಶ್ವಾನದಳವನ್ನು ಗುಣತ್ ಗ್ರಾಮ ಮತ್ತು ಚಿಂಚ್ನಿ ಅಣೆಕಟ್ಟಿನ ಹಿನ್ನೀರಿನ ಉದ್ದಕ್ಕೂ ನಿಯೋಜಿಸಿದ್ದರು. ಅಲ್ಲದೆ, ಆರೋಪಿ ಬಗ್ಗೆ ಸುಳಿವು ನೀಡುವವರಿಗೆ ₹1 ಲಕ್ಷ ಬಹುಮಾನ ಘೋಷಿಸಲಾಗಿತ್ತು.

ಶಿರೂರು ತಹಸಿಲ್‌ನ ಗುಣತ್ ಗ್ರಾಮದ ಸಮೀಪದಲ್ಲಿ ಪುಣೆ ಸಿಟಿ ಪೊಲೀಸರು, ಪುಣೆ ಗ್ರಾಮಾಂತರ ಪೊಲೀಸರು ಮತ್ತು ಸಿಐಡಿ ಅಪರಾಧ ವಿಭಾಗದ ತಂಡಗಳ ಜಂಟಿ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ. ಸ್ಥಳೀಯ ಗ್ರಾಮಸ್ಥರು ಕೂಡ ಆರೋಪಿಯನ್ನು ಹಿಡಿಯಲು ಪೊಲೀಸ್ ತಂಡಕ್ಕೆ ಸಹಾಯ ಮಾಡಿದ್ದಾರೆ.

ಬುಧವಾರ ಬೆಳಿಗ್ಗೆ 5.30ರ ಸುಮಾರಿಗೆ ಸಂತ್ರಸ್ತೆಯು ಪುಣೆಯಿಂದ ಸತಾರಾ ಜಿಲ್ಲೆಯ ಫಾಲ್ತಾನ್‌ಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದರು. ಮಹಿಳೆಯ ಬಳಿಗೆ ಬಂದ ಆರೋಪಿ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಸ್ ಬಂದಿದೆ ಎಂದು ಹೇಳಿ, ಅವರನ್ನು ನಿರ್ಜನ ಸ್ಥಳದಲ್ಲಿ ನಿಲ್ಲಿಸಿದ್ದ ಖಾಲಿ ಬಸ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments