Webdunia - Bharat's app for daily news and videos

Install App

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಮುನ್ನಡೆ: ಇವಿಎಂ ತಿರುಚಿದ್ದಾರೆ ಎಂದು ಸಂಜಯ್ ರಾವತ್ ಆರೋಪ

Krishnaveni K
ಶನಿವಾರ, 23 ನವೆಂಬರ್ 2024 (10:49 IST)
ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮಹಾಯುತಿಗೆ ಭಾರೀ ಮುನ್ನಡೆ ಲಭಿಸುತ್ತಿದ್ದಂತೇ ಚುನಾವಣಾ ಆಯೋಗದ ಮೇಲೆ ಶಿವಸೇನೆಯ ಸಂಜಯ್ ರಾವತ್ ಗಂಭೀರ ಆರೋಪ ಮಾಡಿದ್ದಾರೆ.

ಮಹಾರಾಷ್ಟ್ರದಲ್ಲಿ ಆರಂಭದಲ್ಲಿ ಅಘಾಢಿ ಮತ್ತು ಮಹಾಯುತಿ ನಡುವೆ ಭಾರೀ ಪೈಪೋಟಿಯಿತ್ತು. ಆದರೆ ಇದೀಗ ಬಿಜೆಪಿ ನೇತೃತ್ವದ ಮಹಾಯುತಿ 221 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ ಇತ್ತ ಕಾಂಗ್ರೆಸ್, ಎನ್ ಸಿಪಿ ನೇತೃತ್ವದ ಅಘಾಡಿ ಮುನ್ನಡೆ 53 ಸ್ಥಾನಕ್ಕೆ ಕುಸಿದಿದೆ.

ಈ ಅಂತರ ಬರುತ್ತಿದ್ದಂತೇ ಮಾಧ್ಯಮಗಳ ಮುಂದೆ ಮಾತನಾಡಿದ ಸಂಜಯ್ ರಾವತ್, ಇವಿಎಂ ತಿರುಚಲಾಗಿದೆ ಎಂದು ಆರೋಪ ಮಾಡಿದ್ದಾರೆ. ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಅದಾನಿ ಸೇರಿಕೊಂಡು ಫಲಿತಾಂಶವನ್ನು ತಮಗೆ ಬೇಕಾದ ಹಾಗೆ ತಿರುಚಿದ್ದಾರೆ. ಬಿಜೆಪಿ ನಮ್ಮ ದೇಶವನ್ನು ಅದಾನಿ ದೇಶ ಮಾಡಲು ಹೊರಟಿದೆ. ಇವಿಎಂನ್ನು ಬಿಜೆಪಿಗೆ ಬೇಕಾದಂತೆ ತಿರುಚಲಾಗಿದೆ ಎಂದು ಆರೋಪಿಸಿದ್ದಾರೆ.

ಇದು ನಿಜವಾಗಿಯೂ ಸಿಕ್ಕಿದ ಜನಾದೇಶವಲ್ಲ. ಬಿಜೆಪಿಯವರು ಇವಿಎಂನ್ನು ತಿರುಚಿ ತಮಗೆ ಬೇಕಾದಂತೆ ಫಲಿತಾಂಶ ಪಡೆದುಕೊಂಡಿದ್ದಾರೆ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ. ಈ ಹಿಂದೆಯೂ ಕಾಂಗ್ರೆಸ್ ಹಿಮಾಚಲ ಪ್ರದೇಶದಲ್ಲಿ ಸಮೀಕ್ಷಾ ವರದಿಗಳಿಗೆ ವಿರುದ್ಧವಾಗಿ ತೀರ್ಪು ಬಂದಾಗ ಇಂತಹದ್ದೇ ಆರೋಪ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments