Webdunia - Bharat's app for daily news and videos

Install App

ಸೈಫ್ ಅಲಿ ಖಾನ್ ಮೇಲೆ ದಾಳಿಯಾಗುವಾಗ ಮೋದಿ ಮುಂಬೈನಲ್ಲಿದ್ದರು: ಸಂಜಯ್ ರಾವತ್ ಆರೋಪ (video)

Krishnaveni K
ಗುರುವಾರ, 16 ಜನವರಿ 2025 (14:08 IST)
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆಗೆ ಶಿವಸೇನಾ ನಾಯಕ ಸಂಜಯ್ ರಾವತ್ ಪ್ರತಿಕ್ರಿಯಿಸಿದ್ದು ಪ್ರಧಾನಿ ಮೋದಿ ಮೇಲೆ ಗೂಬೆ ಕೂರಿಸಿದ್ದಾರೆ.

ಸೈಫ್ ಅಲಿ ಖಾನ್ ಒಬ್ಬ ನಟ, ಪದ್ಮಶ್ರೀ ಪುರಸ್ಕೃತ.  ಅವರು ಮತ್ತು ಅವರ ಕುಟುಂಬದವರು ಇತ್ತೀಚೆಗಷ್ಟೇ ಮೋದಿಯವರನ್ನು ಭೇಟಿ ಮಾಡಿದ್ದರು. ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿಯಾದಾಗ ಮೋದಿ ಮುಂಬೈನಲ್ಲೇ ಇದ್ದರು. ಈ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಂಬೈ ಮತ್ತು ರಾಜ್ಯದಲ್ಲಿ ಏನಾಗುತ್ತಿದೆ? ಸಾಮಾನ್ಯ ಜನರೂ ಸುರಕ್ಷಿತವಾಗಿಲ್ಲ. ಇಂತಹ ಘಟನೆಗಳು ಪ್ರತಿನಿತ್ಯ ನಡೆಯುತ್ತಿರುತ್ತದೆ’ ಎಂದು ಸಂಜಯ್ ರಾವತ್ ಆರೋಪಿಸಿದ್ದಾರೆ.

ಇಂದು ಮಾಧ್ಯಮಗಳೊಂದಿಗೆ ಮಾತನಾಡುವಾಗ ಅವರ ಬಳಿ ಪತ್ರಕರ್ತರು ಸೈಫ್ ಮೇಲಿನ ದಾಳಿ ಬಗ್ಗೆ ಪ್ರಶ್ನೆ ಮಾಡಿದರು. ಈ ವೇಳೆ ಅವರು ಪ್ರಧಾನಿ ಮೋದಿ ಮೇಲೆ ಗೂಬೆ ಕೂರಿಸಿದ್ದಾರೆ. ಮೋದಿ ವೈಫಲ್ಯವೇ ಇದಕ್ಕೆ ಕಾರಣ ಎಂದಿದ್ದಾರೆ.

ಇನ್ನು, ಇದಕ್ಕೆಲ್ಲಾ ಉತ್ತರ ನೀಡಬೇಕಾದ ಮುಖ್ಯಮಂತ್ರಿ, ಗೃಹಮಂತ್ರಿಗಳು ಎಲ್ಲಿದ್ದಾರೆ?  ವಿಐಪಿಗಳಿಗೇ ಇಂತಹ ಪರಿಸ್ಥಿತಿಯಾದರೆ ಸಾಮಾನ್ಯ ಜನರು ಇಲ್ಲಿ ಸುರಕ್ಷಿತವೇ ಎಂದು ಸಂಜಯ್ ರಾವತ್ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments