Webdunia - Bharat's app for daily news and videos

Install App

ಸಂಸದರು, ಶಾಸಕರ ಕ್ರಿಮಿನಲ್ ಕೇಸ್‌ಗಳ ವಿವರಣೆ ನೀಡಿ: ಕೇಂದ್ರಕ್ಕೆ ಸುಪ್ರೀಂಕೋರ್ಟ್ ತಾಕೀತು

Webdunia
ಬುಧವಾರ, 1 ನವೆಂಬರ್ 2017 (19:07 IST)
ಕಳೆದ 2014ರ ಲೋಕಸಭೆ ಚುನಾವಣೆಯಲ್ಲಿ 1581 ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಕೇಸ್‌ಗಳ ಬಗ್ಗೆ ನೀಡಿದ ಮಾಹಿತಿಯನ್ನು ನ್ಯಾಯಾಲಯದ ಮುಂದಿಡಿ ಎಂದು ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ನಿರ್ದೇಶನ ನೀಡಿದೆ. 
1581 ಸಂಸದರು ಮತ್ತು ಶಾಸಕರ ವಿರುದ್ಧದ ಕೇಸ್‌ಗಳು ಒಂದು ವರ್ಷದಲ್ಲಿ ಇತ್ಯರ್ಥಗೊಂಡಿವೆಯೇ? ಹಾಗಾದಲ್ಲಿ ಎಷ್ಟು ಮಂದಿ ಅಪರಾಧಿಗಳಾಗಿದ್ದಾರೆ ಮತ್ತು ಎಷ್ಟು ಮಂದಿ ಬಿಡುಗಡೆಯಾಗಿರುವ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂಕೋರ್ಟ್ ಸರಕಾರಕ್ಕೆ  ಸೂಚನೆ ನೀಡಿದೆ.
  
ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ ರಂಜನ್ ಗೊಗೈ ಮತ್ತು ನವೀನ್ ಸಿನ್ಹಾ, ಕೇಂದ್ರ ಸರಕಾರಕ್ಕೆ ಸೂಚನೆ ನೀಡಿ ಆರು ವಾರದೊಳಗೆ 2014 ರಿಂದ ರಾಜಕಾರಣಿಗಳ ಮೇಲೆ ದಾಖಲಾದ ಕ್ರಿಮಿನಲ್ ಕೇಸ್‌ಗಳ ವಿವರಣೆ ನೀಡಿ ಎಂದು ಕೋರಿದೆ.  
 
ಸುಪ್ರೀಂಕೋರ್ಟ್ ಮುಂದೆ ವಾದ ಮಂಡಿಸಿದ ಕೇಂದ್ರ ಸರಕಾರದ ಪರ ವಕೀಲರು, ರಾಜಕೀಯದಲ್ಲಿ ಅಪರಾಧಿಕರಣ ನಿಲ್ಲಬೇಕು ಎಂದು ಸರಕಾರ ಬಯಸುತ್ತದೆ. ರಾಜಕಾರಣಿಗಳು ಭಾಗಿಯಾಗಿರುವ ಪ್ರಕರಣಗಳನ್ನು ವೇಗವಾಗಿ ಇತ್ಯರ್ಥಗೊಳಿಸಲು ವಿಶೇಷ ಕೋರ್ಟ್ ಆರಂಭಿಸಲು ಸರಕಾರ ಬದ್ದವಾಗಿದೆ ಎಂದು ವಾದ ಮಂಡಿಸಿದ್ದಾರೆ.
 
ಕೇಂದ್ರ ಚುನಾವಣೆ ಆಯೋಗ ಮತ್ತು ಕಾನೂನು ಆಯೋಗ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯಾದವರಿಗೆ ಅಜೀವ ನಿಷೇಧ ಹೇರಬೇಕು ಎಂದು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡಿದ್ದು, ಸರಕಾರದ ಪರಿಗಣನೆಯಲ್ಲಿದೆ ಎಂದು ಕೇಂದ್ರದ ಪರ ವಕೀಲರು ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ. 
 
ರಾಜಕಾರಣಿಗಳ ವಿರುದ್ಧದ ಅಪರಾಧ ಪ್ರಕರಣಗಳ ಬಗ್ಗೆ ಆರು ವಾರದೊಳಗೆ ಸಂಪೂರ್ಣ ವಿವರವನ್ನು ಕೋರ್ಟ್‌ಗೆ ನೀಡಬೇಕು. ಡಿಸೆಂಬರ್ 13 ರಂದು  ವಿಚಾರಣೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಗಡುವು ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments