Webdunia - Bharat's app for daily news and videos

Install App

ಕಾಂಗ್ರೆಸ್ ಯಾತ್ರೆಯಲ್ಲಿ ಹಿರಿಯ ಮುಖಂಡರೇ ಮಾಯ!

Webdunia
ಗುರುವಾರ, 7 ಮಾರ್ಚ್ 2019 (15:53 IST)
ಒಂದು ಪಕ್ಷದ ಸಭೆ ಎಂದರೆ ಅದರಲ್ಲಿ ಹಿರಿಯ ನಾಯಕರ ಶ್ರಮವನ್ನು ಮೊದಲಿಗೆ ಸ್ಮರಿಸಲಾಗುತ್ತದೆ. ಆದರೆ ಅಲ್ಲಿ ನಡೆದ ಕಾಂಗ್ರೆಸ್ ಪರಿವರ್ತನಾ ಸಭೆಯಲ್ಲಿ ಜಿಲ್ಲೆಯ ಹಿರಿಯ ನಾಯಕರೇ ಮಾಯವಾಗಿದ್ದು ಚರ್ಚೆಗೆ ಕಾರಣವಾಗಿದೆ.

ಮಂಗಳೂರುನಲ್ಲಿ  ಕಾಂಗ್ರೆಸ್ ಪರಿವರ್ತನಾ ಯಾತ್ರೆ ಹಮ್ಮಿಕೊಂಡಿತ್ತು. ವೇದಿಕೆಯಲ್ಲಿ  ಹಾಕಲಾಗಿದ್ದ ಬೃಹತ್ ಕಟೌಟ್ ನಲ್ಲಿ  ಜಿಲ್ಲೆಯ ನಾಯಕರು ಫೋಟೋಗಳು ಮಾಯವಾಗಿದ್ದವು. ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಷ್ಟ್ರ ರಾಜಕಾರಣದಲ್ಲಿ ಮಿಂಚಿದ್ದ  ಮಾಜಿ ಕೇಂದ್ರ ಸಚಿವ ಹಾಗೂ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ಜನಾರ್ಧನ ಪೂಜಾರಿ, ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯಿಲಿ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್  ಅವರ ಭಾವ ಚಿತ್ರ ಕಣ್ಮರೆ ಆಗಿದ್ದವು. ಇದು ಸ್ವಲ್ಪ ಮಟ್ಟಿಗೆ ಕಾರ್ಯಕರ್ತರಿಗೆ ನಿರಾಶೆಯನ್ನು  ಉಂಟು ಮಾಡಿತ್ತು.

ಕೈ ಪಾಳೆಯದ ಪರಿವರ್ತನಾ ಯಾತ್ರೆಯಲ್ಲಿ ವೇದಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಘಟಾನುಘಟಿ  ನಾಯಕರಿದ್ದರೂ ಈ ಮೂರು ಮಂದಿ ನಾಯಕರ ಹೆಸರು ಕೂಡಾ ಪ್ರಸ್ತಾಪ ಮಾಡಲಿಲ್ಲ.  ಈ ಪೈಕಿ ಮಾಜಿ ಕೇಂದ್ರ ಸಚಿವ ಜನಾರ್ಧನ್ ಪೂಜಾರಿ ಅವರು ಸಿದ್ದರಾಮಯ್ಯ ಕುರಿತು ಪತ್ರಿಕಾಗೋಷ್ಠಿ ಯಲ್ಲಿ ಬಹಿರಂಗ ಟೀಕೆ ಮಾಡಿದ್ದರು. ಕಾಂಗ್ರೆಸ್ ಪಕ್ಷಕ್ಕೆ ಸಿದ್ದರಾಮಯ್ಯ ಶನಿ ಇದ್ದಂತೆ  ಎಂದು  ಹಿಂದೆ ವ್ಯಂಗ್ಯವಾಡಿದ್ದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments