Select Your Language

Notifications

webdunia
webdunia
webdunia
webdunia

ಎನ್ ಸಿಪಿ ನಾಯಕ ಶರದ್ ಪವಾರ್ ಗೆ ಅನಾರೋಗ್ಯ

ಶರದ್ ಪವಾರ್
ಮುಂಬೈ: ಎನ್ ಸಿಪಿ ನಾಯಕ, ಮಾಜಿ ಕೇಂದ್ರ ಸಚಿವ ಶರದ್ ಪವಾರ್ ಅನಾರೋಗ್ಯಕ್ಕೀಡಾಗಿದ್ದು, ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.


ಪಿತ್ತಕೋಶಕ್ಕೆ ಸಂಬಂಧಿಸಿದ ಅನಾರೋಗ್ಯಕ್ಕೀಡಾಗಿರುವ ಶರದ್ ಪವಾರ್ ಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಅದರಂತೆ ಇಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ.

ಕೆಳ ಹೊಟ್ಟೆಯಲ್ಲಿ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಪವಾರ್ ರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಈ ವೇಳೆ ಅವರ ಪಿತ್ತಕೋಶದಲ್ಲಿ ಸಮಸ್ಯೆಯಿರುವುದು ತಿಳಿದುಬಂದಿದೆ. ಎಂಡೋಸ್ಕೋಪಿ ಬಳಿಕ ಶಸ್ತ್ರಚಿಕಿತ್ಸೆ ನಡೆಸಲಾಗುವುದು. ಕೆಲವು ದಿನಗಳ ಮಟ್ಟಿಗೆ ಅವರಿಗೆ ವಿಶ್ರಾಂತಿ ಅನಿವಾರ್ಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೆಲಸ ಮುಗಿಸಿ ಮನೆಗೆ ಬರುತ್ತಿದ್ದ ಯುವತಿಗೆ ಕಿರುಕುಳ ನೀಡುತ್ತಿದ್ದ ವಿವಾಹಿತ