Webdunia - Bharat's app for daily news and videos

Install App

ಬಿಹಾರ್‌ನಲ್ಲಿ ಜೆಡಿಯು-ಬಿಜೆಪಿ ಮೈತ್ರಿ ದುರದೃಷ್ಟಕರ: ಶರದ್ ಯಾದವ್ ಕಿಡಿ

Webdunia
ಸೋಮವಾರ, 31 ಜುಲೈ 2017 (16:14 IST)
ಬಿಜೆಪಿಯೊಂದಿಗೆ ಮೈತ್ರಿಯಾಗಿ ಬಿಹಾರ್‌ ರಾಜ್ಯದಲ್ಲಿ ಸರಕಾರ ರಚಿಸಿರುವ ಬಗ್ಗೆ ಅಸಮಾಧಾನಗೊಂಡಿರುವ ಜೆಡಿಯು ಮಾಜಿ ಅಧ್ಯಕ್ಷ ಶರದ್ ಯಾದವ್ ಇದೀಗ ಮೌನ ಮುರಿದು ಇದೊಂದು ದುರದೃಷ್ಟಕರ ಘಟನೆ ಎಂದು ಹೇಳಿದ್ದಾರೆ. 
 
ಸಂಸತ್ತಿನ ಹೊರಗಡೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರ್ ಜನತೆ ಇಂತಹ ಮೈತ್ರಿಗೆ ಬಹುಮತ ನೀಡಿರಲಿಲ್ಲ. ಇದೊಂದು ದುರದೃಷ್ಟಕರ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
 
ನಿತೀಶ್ ಕುಮಾರ್ ಅವರು ಬಿಜೆಪಿಯೊಂದಿಗೆ ಒಗ್ಗೂಡಿಸಲು ನಿರ್ಧರಿಸಿದ ಮುಂಚೆ "ವಿಶ್ವಾಸ" ದಲ್ಲಿಲ್ಲ ಎಂದು ಯಾದವ್ ಕೂಡ "ಅಸಮಾಧಾನ" ಮಾಡಿದ್ದಾರೆ.
 
ಬಿಹಾರ್ ಸಿಎಂ ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮುಂಚೆ ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂದು ಕಿಡಿಕಾರಿದರು. ಜೆಡಿಯು ಸಂಸದ ಅಲಿ ಅನ್ವರ್ ಮತ್ತು ವಿರೇಂದ್ರ ಕುಮಾರ್ ಕೂಡಾ ಬಿಹಾರ್ ಸಿಎಂ ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 
 
ಕೋಮುವಾದಿಗಳನ್ನು ಸೋಲಿಸಲು ಶರದ್ ಯಾದವ್ ರಾಷ್ಟ್ರವ್ಯಾಪಿ ಪ್ರವಾಸ ಕೈಗೊಳ್ಳಲಿ ಎಂದು ಆರ್‌ಜೆಡಿ ಲಾಲು ಪ್ರಸಾದ್ ಯಾದವ್ ಒತ್ತಾಯಿಸಿದ್ದಾರೆ.
 
ಕಳೆದ ವಾರ ಅಚ್ಚರಿಯ ಬೆಳವಣಿಗೆಯೊಂದರಲ್ಲಿ, ಜೆಡಿಯು ನಾಯಕ ಬಿಹಾರ್ ಸಿಎಂ ನಿತೀಶ್ ಕುಮಾರ್, ಆರ್‌ಜೆಡಿ ಮತ್ತು ಕಾಂಗ್ರೆಸ್‌ನೊಂದಿಗಿನ ಮೈತ್ರಿ ಮುರಿದು ಬಿಜೆಪಿ ತೆಕ್ಕೆಗೆ ಸೇರ್ಪಡೆಯಾಗಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments