Webdunia - Bharat's app for daily news and videos

Install App

ಶರದ್ ಯಾದವ್ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಮುಕ್ತರು: ನಿತೀಶ್ ಕುಮಾರ್

Webdunia
ಶುಕ್ರವಾರ, 11 ಆಗಸ್ಟ್ 2017 (19:28 IST)
ಬಂಡಾಯ ನಾಯಕ ಶರದ್ ಯಾದವ್ ಅವರೊಂದಿಗೆ ಯಾವುದೇ ಸಾಮರಸ್ಯದಿಂದ ಬಾಗಿಲನ್ನು ಮುಚ್ಚಿರುವ ಜೆಡಿಯು ಮುಖ್ಯಸ್ಥ, ಬಿಹಾರ್ ಸಿಎಂ ನಿತೀಶ್ ಕುಮಾರ್, ಬಿಜೆಪಿಯೊಂದಿಗೆ ಮೈತ್ರಿ ಪಕ್ಷದ ನಿರ್ಧಾರವಾಗಿತ್ತೇ ಹೊರತು ನನ್ನ ನಿರ್ಧಾರವಾಗಿರಲಿಲ್ಲ, ಶರದ್ ಯಾದವ್ ತಮಗಿಷ್ಟ ಬಂದ ಯಾವುದೇ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಹೇಳಿದ್ದಾರೆ. 
 
ಶರದ್ ಯಾದವ್ ಅವರು ತಮಗೆ ಪೂರಕವಾದ ತೀರ್ಮಾನ ತೆಗೆದುಕೊಳ್ಳಲು ಮುಕ್ತರಾಗಿದ್ದಾರೆ.  ಪಕ್ಷ ಈಗಾಗಲೇ ತೀರ್ಮಾನ ತೆಗೆದುಕೊಂಡಿದೆ. ಪಕ್ಷದ ಒಪ್ಪಿಗೆಯೊಂದಿಗೆ ನಾನು ನಿರ್ಧಾರ ತೆಗೆದುಕೊಂಡಿದ್ದೇನೆ. ಅವರು ಬೇರೆ ಅಭಿಪ್ರಾಯವನ್ನು ಹೊಂದಿದ್ದರೆ ಹಾಗೆ ಮಾಡಲು ಮುಕ್ತರಾಗಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾದ ನಂತರ ಸುದ್ದಿಗಾರರಿಗೆ ನಿತೀಶ್ ತಿಳಿಸಿದ್ದಾರೆ.
 
ಆರ್‌ಜೆಡಿ ಮತ್ತು ಕಾಂಗ್ರೆಸ್ ಪಕ್ಷದೊಂದಿಗಿನ ಮಹಾಮೈತ್ರಿಕೂಟವನ್ನು ತೊರೆದು ಬಿಜೆಪಿಯೊಂದಿಗೆ ಸೇರ್ಪಡೆಯಾದ ನಂತರ ಸಿಎಂ ನಿತೀಶ್ ಕುಮಾರ್ ಮೊದಲ ಬಾರಿಗೆ ನವದೆಹಲಿಗೆ ಆಗಮಿಸಿದ್ದಾರೆ.
 
ಇದು ಮೈತ್ರಿ ವಿರುದ್ಧ ಯಾದವ್ ಬಂಡಾಯಕ್ಕೆ ನಿತೀಶ್ ನೀಡಿದ ಮೊದಲ ನೇರ ಪ್ರತಿಕ್ರಿಯೆಯಾಗಿದೆ.
 
ಬಿಹಾರದ ಪ್ರವಾಸದಲ್ಲಿರುವ ರಾಜ್ಯಸಭೆಯಲ್ಲಿ ಪಕ್ಷದ ನಾಯಕರಾಗಿರುವ ಯಾದವ್, ನಾನು ಮಹಾಮೈತ್ರಿಕೂಟದೊಂದಿಗೆ ಮುಂದುವರಿಯುತ್ತೇನೆ. ನಿಜವಾದ ಜೆಡಿಯು ನಾಯಕರು ನಮ್ಮೊಂದಿಗಿದ್ದಾರೆ. ನಿತೀಶ್ ಕುಮಾರ್ ಸರ್ಕಾರಿ ಜೆಡಿಯು ಪಕ್ಷದವರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments