Webdunia - Bharat's app for daily news and videos

Install App

ಹೆಲ್ಮೆಟ್, ಮುಖವಾಡ ಧರಿಸಿ ಮಣಪ್ಪುರಂ ಶಾಖೆಯಿಂದ ಹಾಡಹಗಲೇ 30 ಕೆ.ಜಿ ಚಿನ್ನ ದೋಚಿದ ಕಿರಾತಕರು

Sampriya
ಶನಿವಾರ, 4 ಜನವರಿ 2025 (14:35 IST)
Photo Courtesy X
ಸಂಬಲ್‌ಪುರ: ಮಣಪ್ಪುರಂ ಫೈನಾನ್ಸ್ ಶಾಖೆಯೊಂದರಲ್ಲಿ ದರೋಡೆಕೋರರು ಒರೋಬ್ಬರಿ 30 ಕೆ.ಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾದ ಘಟನೆ ಒಡಿಶಾದ ಸಂಬಲ್‌ಪುರ ನಗರದಲ್ಲಿ ನಡೆದಿದೆ.

ಹತ್ತು ಮಂದಿ ದರೋಡೆಕೋರರು ಹೆಲ್ಮೆಟ್ ಮತ್ತು ಮುಖವಾಡಗಳನ್ನು ಧರಿಸಿ ಏಕಾಏಕಿ ಶಾಖೆಗೆ ನುಗ್ಗಿ ಸಿಬ್ಬಂದಿಗೆ ಬಂದೂಕು ತೋರಿಸಿ ಬೆದರಿಕೆ ಹಾಕಿದ್ದಾರೆ. ಇದೇ ವೇಳೆ ಶಾಖೆಯ ವ್ಯವಸ್ಥಾಪಕರು ಸೇರಿದಂತೆ ಹಲವರನ್ನು ಕಟ್ಟಿ ಹಾಕಿ 30 ಕೆ.ಜಿ ಚಿನ್ನಾಭರಣ ಮತ್ತು ₹4 ಲಕ್ಷ ಹಣವನ್ನು ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಸಂಬಂಧ ಶಾಖೆಯ ಅಧಿಕಾರಿಗಳು ನೀಡಿದ ದೂರನ್ನು ಆಧರಿಸಿ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ನಡೆದ ಸ್ಥಳ ಮತ್ತು ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸುತ್ತಿದ್ದು, ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ. ಕಂಪನಿಯ ಉದ್ಯೋಗಿಗಳನ್ನೂ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಯಾವುದೇ ಸಿಬ್ಬಂದಿ ಅಥವಾ ಗ್ರಾಹಕರು ಗಾಯಗೊಂಡಿಲ್ಲ. ಕಂಪನಿಯ ಗ್ರಾಹಕರು ಆತಂಕ ಪಡುವ ಅಗತ್ಯತೆ ಇಲ್ಲ. ಕಂಪನಿಯು ನಿಮ್ಮ ಸ್ವತ್ತುಗಳಿಗೆ ಜವಾಬ್ದಾರಿಯಾಗಿದ್ದು, ನಷ್ಟವನ್ನು ತುಂಬಿಕೊಡಲಿದೆ ಎಂದು ಮಣಪ್ಪುರಂ ಫೈನಾನ್ಸ್ ಹೇಳಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments