ಸ್ಮೃತಿ ಇರಾನಿ ಬೆಂಬಲಿಗನ ಹತ್ಯೆ

Webdunia
ಭಾನುವಾರ, 26 ಮೇ 2019 (12:36 IST)
ಅಮೇಠಿ : ಉತ್ತರ ಪ್ರದೇಶದ ಅಮೇಠಿ ಕ್ಷೇತ್ರದ ನೂತನ ಸಂಸದೆಯಾಗಿ ಆಯ್ಕೆಯಾಗಿರುವ  ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಬೆಂಬಲಿಗನನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಬರೌಲಿಯಾ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು ಸಿಂಗ್ ನಿವಾಸಕ್ಕೆ ನುಗ್ಗಿದ ಮೂವರು ದುಷ್ಕರ್ಮಿಗಳು ಗುಂಡಿಕ್ಕಿ ಪರಾರಿಯಾಗಿದ್ದಾರೆ.



ಸುರೇಂದ್ರ ಸಿಂಗ್ ಹತ್ಯೆಯಾದ ಬಿಜೆಪಿ ಮುಖಂಡರಾಗಿದ್ದು, ಶನಿವಾರ ತಡ ರಾತ್ರಿ ಘಟನೆ ನಡೆದಿದೆ. ಕೆಲ ದುಷ್ಕರ್ಮಿಗಳು ಸುರೇಂದ್ರ ಅವರ ಮನೆಯ ಬಳಿಯೇ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಅವರನ್ನು ಲಖನೌನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಿಕೊಳ್ಳಲಾಗಲಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 
ಮೃತರು ಗ್ರಾಮದ ಮಾಜಿ ಮುಖ್ಯಸ್ಥರೂ ಆಗಿದ್ದು, ಇರಾನಿಯವರಿಗೆ ಬಹಳ ಆಪ್ತರಾಗಿದ್ದರು ಎಂದು ತಿಳಿದು ಬಂದಿದೆ.
ಆದರೆ ಹತ್ಯೆ ಮಾಡಲು ಕಾರಣ ಏನೆಂಬುವುದು ತಿಳಿದು ಬಂದಿಲ್ಲ. ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿಯೇ ಕೊಲೆ ಮಾಡಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.


ಸುರೇಂದ್ರ ಹತ್ಯೆ ಹಿನ್ನೆಲೆಯಲ್ಲಿ ಅವರ  ಕುಟುಂಬವನ್ನು ಸಂಜೆ ವೇಳೆಗೆ  ಸ್ಮೃತಿ ಇರಾನಿ ಭೇಟಿ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಎಲ್ಲರೂ ಇಷ್ಟು ಒಳ್ಳೇವ್ರು ಆಗಿರಲ್ಲ... ನೆನೆಯುತ್ತಿದ್ದ ಶಾಲಾ ಬಾಲಕಿ ನೋಡಿ ಅಧಿಕಾರಿ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಯಾಕೋ ಮೊದಲೇ ಹೇಳಿಲ್ಲ.. ರೋಗಿ ಮಾಡಿದ ಕೆಲಸಕ್ಕೆ ಪಿತ್ತ ನೆತ್ತಿಗೇರಿ ವೈದ್ಯರೊಬ್ಬರು ಮಾಡಿದ್ದೇನು ಗೊತ್ತಾ Video

ಪಾಕ್‌ನ ಪ್ರತಿಯೊಂದು ದುಸ್ಸಾಹಸಕ್ಕೂ, ಊಹಿಸದ ರೀತಿಯಲ್ಲಿ ಉತ್ತರ ನೀಡುತ್ತೇವೆ

ಮುಂದಿನ ಸುದ್ದಿ
Show comments