Select Your Language

Notifications

webdunia
webdunia
webdunia
webdunia

ಹೊಸ ಮೊಬೈಲ್ ಫೋನ್ ಖರೀದಿಸಲು ಹಣ ನೀಡದ ಮಲತಾಯಿಗೆ ಇಂತಹ ಗತಿ ತಂದ ಮಗ

ಮೀರತ್
ಮೀರತ್ : ಹೊಸ ಮೊಬೈಲ್ ಫೋನ್ ಖರೀದಿಸಲು ಹಣ ನೀಡದ ಮಲತಾಯಿಯನ್ನು ಯುವಕನೊಬ್ಬ ಕತ್ತು ಹಿಸುಕಿ ಕೊಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.

ಯುವಕ ಮಲತಾಯಿಯ ಬಳಿ ಬಂದು ಹೊಸ ಮೊಬೈಲ್ ಖರೀದಿಸಲು 10000ರೂ ಕೇಳಿದ್ದಾನೆ. ಅದಕ್ಕೆ ಆಕೆ ತನ್ನ ಬಳಿ ಹಣವಿಲ್ಲ ಎಂದು ಹೇಳಿದ್ದಾಳೆ. ಇದರಿಂದ ಕೋಪಗೊಂಡ ಯುವಕ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ತಂದೆಯ ಬಳಿ ಹೋಗಿ ಕೊಲೆ ವಿಚಾರ ತಿಳಿಸಿ ಪರಾರಿಯಾಗಿದ್ದಾನೆ.

ಈ ಬಗ್ಗೆ ತಂದೆ ಮಗನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಿಸಿದ ಬಾಲಕಿಯ ಮೇಲೆ ಬಿತ್ತು ಕೇಸ್