Webdunia - Bharat's app for daily news and videos

Install App

ತಂದೆಯ ಕತ್ತು ಹಿಸುಕಿ ಕೊಂದು ಬೆಂಕಿ ಹಚ್ಚಿದ ಮಗ!

Webdunia
ಸೋಮವಾರ, 7 ಮಾರ್ಚ್ 2022 (08:29 IST)
ಲಕ್ನೋ : ಆಸ್ತಿ ವಿಚಾರಕ್ಕೆ ವೃದ್ಧ ತಂದೆಯ ಕತ್ತು ಹಿಸುಕಿ ಮಗನೇ ಹತ್ಯೆಗೈದು, ಶವವನ್ನು ಕಂಬಳಿಯಲ್ಲಿ ಸುತ್ತಿ ನಂತರ ಬೆಂಕಿ ಹಚ್ಚಿರುವ ಘಟನೆ ಉತ್ತರ ಪ್ರದೇಶದ ಮಥುರಾದ ನರ್ಹೌಲಿಯಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ಅಮೃತ್ ಲಾಲ್ (55) ಮಾಸ್ಟರ್ ಮೇಸ್ತ್ರಿ ಎಂದು ಗುರುತಿಸಲಾಗಿದೆ. ಸುಮಾರು 10-12 ದಿನಗಳ ಹಿಂದೆ ಅಮೃತ್ ಲಾಲ್ ಅವರ ಪತ್ನಿ ಆಶಾದೇವಿ ಅವರು ತಂದೆ-ಮಗ ಇಬ್ಬರನ್ನು ಮನೆಯಲ್ಲಿ ಬಿಟ್ಟು ತಂದೆಯ ಮನೆಗೆ ಹೋಗಿದ್ದರು. ತಂದೆಯೊಂದಿಗೆ ಏಕಾಂಗಿಯಾಗಿದ್ದ ವಿನೀತ್ ಅಮೃತ್ ಲಾಲ್ಗೆ ಮನೆ ಮಾರಾಟ ಮಾಡುವಂತೆ ಒತ್ತಡ ಹೇರಲು ಆರಂಭಿಸಿದ್ದಾರೆ.

ಇದಕ್ಕೆ ಅಮೃತ್ ಲಾಲ್ ಅವರು ನಿರಾಕರಿಸಿ ವಿನೀತ್ಗೆ ನಿಂದಿಸಿದ್ದಾರೆ. ಇದರಿಂದ ಕೋಪಗೊಂಡ ವಿನೀತ್ ತಂದೆಯ ಕತ್ತನ್ನು ಹಿಸುಕಿ ಕೊಲೆ ಮಾಡಿದ್ದಾನೆ. ಬಳಿಕ ಶವವನ್ನು ಕಂಬಳಿಯಲ್ಲಿ ಸುತ್ತಿ ಸುಟ್ಟು ಹಾಕಿದ್ದಾನೆ.

ಈ ಘಟನೆ ಕುರಿತಂತೆ ತನಿಖೆ ವೇಳೆ ಆಶಾದೇವಿ ಅವರು, ವಾಸಿಸುತ್ತಿದ್ದ ಮನೆಯನ್ನು ಮಾರಾಟ ಮಾಡಲು ವಿನೀತ್ ಬಯಸಿದ್ದ. ವಿನೀತ್ ಈಗಾಗಲೇ ತಮ್ಮ 100 ಚದರ ಮೀಟರ್ನಷ್ಟು ನಿವೇಶನವನ್ನು ಮಾರಾಟ ಮಾಡಿದ್ದಾನೆ. ಇದು ಕುಟುಂಬದಲ್ಲಿ ವಿವಾದಕ್ಕೆ ಕಾರಣವಾಗಿತ್ತು ಮತ್ತು ವಿನೀತ್ ಆಗಾಗ್ಗೆ ಮನೆಯನ್ನು ಮಾರಾಟ ಮಾಡಿ ತನಗೆ ಪಾಲು ನೀಡುವಂತೆ ಒತ್ತಾಯಿಸುತ್ತಿದ್ದ.

ಅಲ್ಲದೇ ನಾಲ್ಕು ವರ್ಷಗಳ ಹಿಂದೆ ಕಿರಿಯ ಮಗ ನೆಹನಾ ಆತ್ಮಹತ್ಯೆ ಮಾಡಿಕೊಂಡಿದ್ದು ಸಹ ಕುಟುಂಬದಲ್ಲಿ ಕಲಹ ಉಂಟಾಗಲು ಕಾರಣವಾಗಿತ್ತು ಎಂದು ಪೊಲೀರಿಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments