Webdunia - Bharat's app for daily news and videos

Install App

ರಾಯ್ ಬರೇಲಿ ಜನತೆಗೆ ಪತ್ರ ಬರೆದ ಸೋನಿಯಾ ಗಾಂಧಿ

Krishnaveni K
ಗುರುವಾರ, 15 ಫೆಬ್ರವರಿ 2024 (16:29 IST)
ನವದೆಹಲಿ: ಲೋಕಸಭೆ ಚುನಾವಣೆಗೆ ಸ್ಪರ್ಧಿಸದೇ ಇರಲು ನಿರ್ಧರಿಸಿರುವ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ರಾಯ್ ಬರೇಲಿ ಕ್ಷೇತ್ರದ ಜನತೆಗೆ ಭಾವುಕ ಪತ್ರ ಬರೆದಿದ್ದಾರೆ.

ಆರೋಗ್ಯ ಸಮಸ್ಯೆಯಿಂದಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸದೇ ಇರಲು ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ. ಹೀಗಾಗಿ ಈ ಬಾರಿ ಅವರು ರಾಜಸ್ಥಾನ್ ನಿಂದ ರಾಜ್ಯ ಸಭೆಗೆ ಸ್ಪರ್ಧಿಸುತ್ತಿದ್ದಾರೆ. ನಿನ್ನೆ ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಸಿದ್ದಾರೆ. ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿತ್ತು.

ಇದೀಗ ತಾವು ಇಷ್ಟು ದಿನ ಪ್ರತಿನಿಧಿಸುತ್ತಿದ್ದ ರಾಯ್ ಬರೇಲಿ ಕ್ಷೇತ್ರದ ಜನತೆ ಧನ್ಯವಾದ ಸಲ್ಲಿಸವುದರ ಜೊತೆಗೆ ಸೋನಿಯಾ ಪತ್ರವೊಂದನ್ನು ಬರೆದಿದ್ದಾರೆ. ನನ್ನನ್ನು ಇಷ್ಟು ದಿನ ನೋಡಿಕೊಂಡಿದ್ದಕ್ಕೆ ಕೃತಜ್ಞಳಾಗಿದ್ದೇನೆ ಎಂದಿದ್ದಾರೆ.

‘ನಮ್ಮ ಸಂಬಂಧವು ತೀರಾ ಹಳೆಯದಾಗಿದೆ. ನನ್ನ ಅತ್ತೆಯಿಂದಾಗಿ ನಾನು ನಿಮ್ಮನ್ನು ಅದೃಷ್ಟಶಾಲಿಯಾಗಿದ್ದೇನೆ. ರಾಯ್ ಬರೇಲಿಯೊಂದಿಗೆ ನಮ್ಮ ಕುಟುಂಬದ ಸಂಬಂಧಗಳು ತುಂಬಾ ಆಳವಾಗಿದೆ. ಮಾವ ಫಿರೋಜ್ ಗಾಂಧಿ ಬಳಿಕ ಅತ್ತೆ ಇಂದಿರಾ ಗಾಂಧಿಯವರನ್ನು ನಿಮ್ಮವರಾಗಿ ಮಾಡಿಕೊಂಡಿದ್ದೀರಿ. ನನ್ನ ಅತ್ತೆಯನ್ನು ಮತ್ತು ನನ್ನ ಜೀವನ ಸಂಗಾತಿಯನ್ನು ಕಳೆದುಕೊಂಡ ನಂತರ ನಾನು ನಿಮ್ಮ ಬಳಿಗೆ ಬಂದೆ ಮತ್ತು ನೀವು ನನ್ನನ್ನು ನಿಮ್ಮ ತೋಳುಗಳಲ್ಲಿ ಭದ್ರ ಮಾಡಿಕೊಂಡಿರಿ. ಕಳೆದ ಎರಡು ಚುನಾವಣೆಗಳಲ್ಲಿ ಕಷ್ಟದ ಪರಿಸ್ಥಿತಿಯಲ್ಲೂ ನನ್ನ ಜೊತೆಗೆ ನಿಂತಿದ್ದಿರಿ. ನಾನು ಇಂದು ಏನಾಗಿದ್ದರೂ ನಿಮ್ಮಿಂದಲೇ’ ಎಂದು ಭಾವುಕ ಪತ್ರ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಅದನ್ನು ನೋಡಿದರೆ ಮುಖ ಮುಚ್ಚಿಕೊಂಡು ಓಡಬೇಕು

ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕುಮಾರಸ್ವಾಮಿಗೆ ಬಿಗ್‌ ರಿಲೀಫ್, ಏನಿದು ಪ್ರಕರಣ

ಕೋಮುಗಲಭೆಗೆ ಹೆಚ್ಚು ಸುದ್ದಿಯಾಗುತ್ತಿದ್ದ ದ.ಕನ್ನಡದಲ್ಲಿ ಗಮನ ಸೆಳೆದ ಮಸೀದಿ ದರ್ಶನ

ದಸರಾ ಉದ್ಘಾಟನೆ ವಿವಾದ, ಕೋರ್ಟ್‌ನಲ್ಲಿ ಹಿನ್ನಡೆ ಬೆನ್ನಲ್ಲೇ ಪೋಸ್ಟ್ ಹಂಚಿಕೊಂಡ ಪ್ರತಾಪ್ ಸಿಂಹ

ಮುಂಬೈ: ಬ್ಯಾಂಕಾಂಕ್‌ನಿಂದ ಬ್ಯಾಗ್‌ನಲ್ಲಿ ತಂದಿದ್ದ 67 ವಿದೇಶಿ ಪ್ರಾಣಿಗಳ ತಂದಿದವ ಅರೆಸ್ಟ್‌

ಮುಂದಿನ ಸುದ್ದಿ
Show comments