Webdunia - Bharat's app for daily news and videos

Install App

ಹೆಣ್ಣು ಮಗುವಿನ ಪೋಷಕರಿಗೆ ಗುಡ್ ನ್ಯೂಸ್: ಎಲ್ಲಾ ಸುಧಾಮೂರ್ತಿ ರಾಜ್ಯಸಭೆ ಭಾಷಣದ ಇಫೆಕ್ಟ್

Krishnaveni K
ಬುಧವಾರ, 19 ಫೆಬ್ರವರಿ 2025 (10:34 IST)
ನವದೆಹಲಿ: ಹೆಣ್ಣು ಮಗುವಿನ ಪೋಷಕರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಎಲ್ಲವೂ ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮಾಡಿದ ಭಾಷಣದ ಇಫೆಕ್ಟ್ ಎನ್ನಬಹುದು.

ತಾವು ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾದ ಬಳಿಕ ಸುಧಾಮೂರ್ತಿ ಮೊದಲ ಭಾಷಣದಲ್ಲೇ ಇತ್ತೀಚೆಗಿನ ದಿನಗಳಲ್ಲಿ ವ್ಯಾಪಕವಾಗಿರುವ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಜಾಗೃತಿ ಮೂಡಿಸುವ ಭಾಷಣ ಮಾಡಿದ್ದರು. ಅಲ್ಲದೆ, ಗರ್ಭಕಂಠದ ಕ್ಯಾನ್ಸರ್ ಗೆ ನೀಡಲಾಗುವ ಲಸಿಕೆ ಕಡಿಮೆ ದರದಲ್ಲಿ ಜನರಿಗೆ ಸಿಗುವಂತಾಗಬೇಕು ಎಂದು ಪ್ರತಿಪಾದಿಸಿದ್ದರು.

ಅವರ ಭಾಷಣಕ್ಕೆ ಈಗ ಕೊನೆಗೂ ಫಲ ಸಿಕ್ಕಿದೆ. ಇನ್ನು ಆರು ತಿಂಗಳಿನಲ್ಲೇ ಬಾಲಕಿಯರಿಗೆ ಕ್ಯಾನ್ಸರ್ ಲಸಿಕೆಯನ್ನು ಸರ್ಕಾರದ  ವತಿಯಿಂದಲೇ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಗರ್ಭಕಂಠದ ಕ್ಯಾನ್ಸರ್ ಗೆ ನೀಡಲಾಗುವ ಲಸಿಕೆ ದುಬಾರಿಯದ್ದಾಗಿತ್ತು. ಇದೀಗ ಸರ್ಕಾರವೇ ಲಸಿಕೆ ನೀಡಲು ಮುಂದಾಗಿರುವುದು ಶುಭ ಸುದ್ದಿಯೇ.

9 ರಿಂದ 16 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ. ಗರ್ಭಕಂಠದ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಬಾಯಿ ಕ್ಯಾನ್ಸರ್ ನಿಯಂತ್ರಿಸುವ ಲಸಿಕೆ ಇದಾಗಿರಲಿದೆ. ಲಸಿಕೆ ಈಗ ಪ್ರಾಯೋಗಿಕ ಹಂತದಲ್ಲಿದೆ. ಇನ್ನು ಐದಾರು ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಸಹಾಯಕ ಸಚಿವ ಪ್ರತಾಪ್ ಜಾಧವ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಪಾಕಿಸ್ತಾನದ ಮುಂದೆ ನಮ್ಮ ಎಷ್ಟು ವಿಮಾನ ಕಳೆದುಕೊಂಡಿತು ಲೆಕ್ಕ ಕೊಡಿ

ಟರ್ಕಿ ಸೇಬು ಬಹಿಷ್ಕಾರಕ್ಕೆ ಹೆಚ್ಚಿದ ಒತ್ತಾಯ: 24ರಂದು ಪ್ರಧಾನಿಯೊಂದಿಗೆ ಚರ್ಚೆ

India Pakistan: ತಿನ್ನೋದು ಭಾರತದ ಅನ್ನ, ಸೇವೆ ಮಾತ್ರ ಪಾಕಿಸ್ತಾನಕ್ಕೆ: ಯುಪಿ ವ್ಯಕ್ತಿ ಅರೆಸ್ಟ್

ನಿಮ್ಮ ಪ್ರಾಮಾಣಿಕತೆಯನ್ನು ಮೆಚ್ಚಿದೆ: ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟ ಸಂಸದ ತೇಜಸ್ವಿ ಸೂರ್ಯ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments