Webdunia - Bharat's app for daily news and videos

Install App

ನ್ಯಾಯಾಂಗ ವ್ಯವಸ್ಥೆ ಬಗ್ಗೆ ತಿರುಗಿ ಬಿದ್ದ ಸುಪ್ರೀಂ ಕೋರ್ಟ್ ನ್ಯಾಯಾಧೀಶರು!

Webdunia
ಶುಕ್ರವಾರ, 12 ಜನವರಿ 2018 (17:24 IST)
ನವದೆಹಲಿ: ಸಂವಿಧಾನದ ಪ್ರಮುಖ ಅಂಗವಾದ ನ್ಯಾಯಾಂಗ ವ್ಯವಸ್ಥೆ ಇದುವರೆಗೆ ಯಾವುದೇ  ತಕರಾರುಗಳಿಲ್ಲದೇ ಶಾಂತಯುತವಾಗಿತ್ತು. ಆದರೆ ಇದೀಗ ದೇಶದ ಸರ್ವೋಚ್ಛ ನ್ಯಾಯಾಲಯ ವ್ಯವಸ್ಥೆಯ ಬಗ್ಗೆ ನ್ಯಾಯಾಧೀಶರಿಂದಲೇ ಅಪಸ್ವರ ಕೇಳಿಬಂದಿದೆ.
 

ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ  ದೀಪಕ್ ಮಿಶ್ರಾ ವಿರುದ್ಧ ಹಿರಿಯ ನ್ಯಾಯಮೂರ್ತಿಗಳಾದ ನ್ಯಾ. ಜೆ.ಚಲಮೇಶ್ವರ, ನ್ಯಾ. ರಂಜನ್ ಗೊಗೊಯ್, ನ್ಯಾ. ಕುರಿಯನ್ ಜೊಸೆಫ್ ಮತ್ತು ನ್ಯಾ. ಮದನ್ ಲೊಕೂರ್ ಅಪಸ್ವರವೆತ್ತಿದ್ದಾರೆ.

ನ್ಯಾಯಾಂಗ ವ್ಯವಸ್ಥೆಯಲ್ಲಿ ಎಲ್ಲವೂ ಸರಿಯಾಗಿಲ್ಲ. ಇದನ್ನು ತಕ್ಷಣವೇ ಸರಿಪಡಿಸಬೇಕಿದೆ. ಇಲ್ಲವಾದಲ್ಲಿ ದೇಶದ ನ್ಯಾಯಾಂಗ ವ್ಯವಸ್ಥೆಯೇ ಹದಗೆಡಲಿದೆ ಎಂದು ಎಚ್ಚರಿಸಿ ಇವರು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾಗೆ ಪತ್ರ ಬರೆದಿದ್ದಾರೆ. ಆದರೆ ಪತ್ರ ಬರೆದರೂ ಮುಖ್ಯ ನ್ಯಾಯಮೂರ್ತಿಗಳು ಬೆಲೆ ಕೊಟ್ಟಿಲ್ಲ ಎಂದು ಈ ನಾಲ್ವರು ಹಿರಿಯ ನ್ಯಾಯಾಧೀಶರು ಪತ್ರಿಕಾಗೋಷ್ಠಿ ನಡೆಸಿ ತಮ್ಮ ಅಪಸ್ವರ ಹೊರಹಾಕಿದ್ದಾರೆ.

ನ್ಯಾಯಾಂಗ ವ್ಯವಸ್ಥೆಯ ಪ್ರಮುಖ ಸದಸ್ಯರ ಈ ದಿಡೀರ್ ಭಿನ್ನಮತ ದೇಶವನ್ನೇ ಬೆಚ್ಚಿ ಬೀಳಿಸಿದೆ. ನ್ಯಾ.ಚಲಮೇಶ್ವರ ನಿವಾಸದಲ್ಲಿ ನಡೆದ ಪತ್ರಿಕಾಗೋಷ್ಠಿಗೆ ಪ್ರತಿಯಾಗಿ ಕೆಲವೇ ಕ್ಷಣಗಳಲ್ಲಿ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಕೂಡಾ ಸುದ್ದಿಗೋಷ್ಠಿ ಕರೆದಿದ್ದು, ಅವರು ಏನು ಮಾತನಾಡಲಿದ್ದಾರೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ
Show comments