Webdunia - Bharat's app for daily news and videos

Install App

ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜತೆ ಗುರುತಿಸಿಕೊಂಡಿದ್ದ ಕೈ ಕಾರ್ಯಕರ್ತೆಯ ಶವ ಸೂಟ್‌ಕೇಸ್‌ನಲ್ಲಿ ಪತ್ತೆ

Sampriya
ಭಾನುವಾರ, 2 ಮಾರ್ಚ್ 2025 (10:03 IST)
Photo Courtesy X
ದೆಹಲಿ: ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಜತೆ ಕಾಣಿಸಿಕೊಂಡಿದ್ದ 22 ವರ್ಷದ ಕಾಂಗ್ರೆಸ್ ಕಾರ್ಯಕರ್ತೆ  ಹಿಮಾನಿ ನರ್ವಾಲ್ ಅವರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಶುಕ್ರವಾರ ಸಂಪ್ಲಾ ಬಸ್ ನಿಲ್ದಾಣದ ಬಳಿ ನೀಲಿ ಬಣ್ಣದ ದೊಡ್ಡ ಸೂಟ್‌ಕೇಸ್‌ನಲ್ಲಿ ಹಿಮಾಣಿ ಮೃತದೇಹ ಪತ್ತೆಯಾಗಿದ್ದು, ಈ ಕುರಿತು ಸಂಪ್ಲಾ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿತ್ತು.

ಈ ಬಗ್ಗೆ ಮಾಜಿ ಸಿಎಂ ಮಾಜಿ ಭೂಪಿಂದರ್ ಸಿಂಗ್ ಹೂಡಾ ಅವರು ಪ್ರತಿಕ್ರಿಯಿಸಿ, ಮಹಿಳೆಯರ ವಿರುದ್ಧ ಯಾವುದೇ ರೀತಿಯ ಘಟನೆ ನಡೆದರೆ, ಸರ್ಕಾರ ಮತ್ತು ಇಡೀ ಕಾನೂನು ಸುವ್ಯವಸ್ಥೆ ಅನುಕರಣೀಯ ಕ್ರಮ ತೆಗೆದುಕೊಳ್ಳಬೇಕು, ಭವಿಷ್ಯದಲ್ಲಿ ಅಪರಾಧ ಪ್ರವೃತ್ತಿಯುಳ್ಳ ಯಾರಾದರೂ ಇಂತಹ ಕೃತ್ಯ ಮಾಡುವ ಮೊದಲು ಸಾವಿರ ಬಾರಿ ಯೋಚಿಸುತ್ತಾರೆ ಎಂದು ಹೂಡಾ ಹೇಳಿದರು.

ಮಹಿಳೆಯರ ವಿರುದ್ಧ ಯಾವುದೇ ರೀತಿಯ ಘಟನೆ ನಡೆದರೆ, ಸರ್ಕಾರ ಮತ್ತು ಇಡೀ ಕಾನೂನು ಸುವ್ಯವಸ್ಥೆ ಅನುಕರಣೀಯ ಕ್ರಮವನ್ನು ತೆಗೆದುಕೊಳ್ಳಬೇಕು, ಭವಿಷ್ಯದಲ್ಲಿ ಯಾವನೂ ಈ ರೀತಿಯ ಕೃತ್ಯ ಎಸಗುವ ಯೋಚನೆಗೂ ಮುನ್ನಾ, ಸಾವಿರ ಬಾರಿ ಯೋಚನ ಮಾಡಬೇಕೆಂದು ಖಾರವಾಗಿ ಪ್ರತಿಕ್ರಿಯಿಸಿದರು.ಸ

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ ಎಂಬುದನ್ನು ಈ ದುರಂತ ಘಟನೆ ಮತ್ತೊಮ್ಮೆ ಬಹಿರಂಗಪಡಿಸಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೇಳಿದ್ದಾರೆ.

ರೋಹ್ಟಕ್‌ನಲ್ಲಿ ಸಕ್ರಿಯ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ ಅವರ ಬರ್ಬರ ಹತ್ಯೆಯ ಸುದ್ದಿ ಅತ್ಯಂತ ದುಃಖಕರ ಮತ್ತು ಆಘಾತಕಾರಿಯಾಗಿದೆ. ಅಗಲಿದ ಆತ್ಮಕ್ಕೆ ಶ್ರದ್ಧಾಂಜಲಿ ಸಲ್ಲಿಸುತ್ತೇನೆ ಮತ್ತು ಕುಟುಂಬದ ಸದಸ್ಯರಿಗೆ ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಬಾಲಕಿಯೊಬ್ಬಳನ್ನು ಈ ರೀತಿ ಕೊಲೆ ಮಾಡಿ ಸೂಟ್‌ಕೇಸ್‌ನಲ್ಲಿ ಶವ ಪತ್ತೆಯಾಗಿರುವುದು ಅತ್ಯಂತ ದುಃಖಕರ ಮತ್ತು ಆಘಾತಕಾರಿಯಾಗಿದೆ. ಇದು ಸ್ವತಃ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಕಳಂಕವಾಗಿದೆ ಎಂದು ಹೂಡಾ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಬೆಂಗಳೂರು-ಕನಕಪುರ ರಸ್ತೆಯಲ್ಲಿ ಬಸ್ ಪಲ್ಟಿ: ಸಬ್‌ಇನ್ಸ್‌ಪೆಕ್ಟರ್‌ ಸೇರಿ ಇಬ್ಬರು ದಾರುಣ ಸಾವು

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

ಮುಂದಿನ ಸುದ್ದಿ
Show comments