Webdunia - Bharat's app for daily news and videos

Install App

ಮೇಕೆದಾಟು ವಿಚಾರಣೆ ಮುಂದೂಡಿದ ಸುಪ್ರೀಂ

Webdunia
ಮಂಗಳವಾರ, 11 ಜನವರಿ 2022 (13:12 IST)
ನವದೆಹಲಿ: ಮೇಕೆದಾಟು ಆಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ.

ಈ ಪ್ರಕರಣ ವಿಚಾರಣೆಯನ್ನು ಜನವರಿ 25ರಂದು ನಡೆಸಲಾಗುವುದು ಎಂದು ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿ ಸದಸ್ಯ ಪೀಠ ಹೇಳಿದೆ. ತಮಿಳುನಾಡು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ಇಂದು ನಡೆಯಬೇಕಿತ್ತು. ವಿಚಾರಣೆ ನಡೆಯಬೇಕಿದ್ದ ಅರ್ಜಿ, ಮುಲ್ಲೈ ಪೆರಿಯಾರ್ ಆಣೆಕಟ್ಟು ಸುರಕ್ಷತೆ ಸಂಬಂಧಿಸಿದ ಪ್ರಕರಣವೊಂದರ ಜೊತೆಗೆ ಸುಪ್ರೀಂಕೋರ್ಟ್ ಟ್ಯಾಗ್ ಮಾಡಿತ್ತು.

ಇಂದು ವಿಚಾರಣೆ ವೇಳೆ ಕರ್ನಾಟಕ ಮತ್ತು ತಮಿಳುನಾಡು ಪರ ವಾದ ಮಂಡಿಸಿದ ವಕೀಲರು ಮುಲ್ಲೈ ಪೆರಿಯಾರ್ ಮತ್ತು ಮೇಕೆದಾಟಿಗೂ ಯಾವುದೇ ಸಂಬಂಧ ಇಲ್ಲ ಎರಡು ಅರ್ಜಿಗಳು ಪ್ರತ್ಯೇಕ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದರು.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಸಮಗ್ರ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ತಾತ್ವಿಕ ಒಪ್ಪಿಗೆ ನೀಡಿದ ಬಳಿಕ ಯೋಜನೆ ವಿರೋಧಿಸಿ ತಮಿಳುನಾಡು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಯೋಜನೆಗೆ ಅನುಮತಿ ನೀಡದಂತೆ ಕೇಂದ್ರಕ್ಕೆ ಸೂಚಿಸಲು ಮನವಿ ಮಾಡಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಮುಂದಿನ ಸುದ್ದಿ
Show comments