Webdunia - Bharat's app for daily news and videos

Install App

ರಾಹುಲ್ ಹೇಳಿಕೆ ವಿಚಾರವಾಗಿ ಸಂಸತ್ನಲ್ಲಿ ಗದ್ದಲ

Webdunia
ಮಂಗಳವಾರ, 14 ಮಾರ್ಚ್ 2023 (11:43 IST)
ನವದೆಹಲಿ : ಲಂಡನ್ನಲ್ಲಿ ರಾಹುಲ್ ಗಾಂಧಿ ನೀಡಿದ ಹೇಳಿಕೆ ಇಂದು ಸಂಸತ್ ಅಧಿವೇಶನವನ್ನು ಬಲಿ ತೆಗೆದುಕೊಂಡಿದೆ. ಎರಡನೇ ಅವಧಿಯ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಿದ್ದು, ಸದನ ಆರಂಭವಾಗುತ್ತಿದ್ದಂತೆ ಗದ್ದಲಕ್ಕೆ ವೇದಿಕೆಯಾಯಿತು.

ರಾಹುಲ್ ಗಾಂಧಿ ಲಂಡನ್ನಲ್ಲಿ ನೀಡಿದ ಹೇಳಿಕೆಯನ್ನು ಪ್ರಸ್ತಾಪಿಸಿದ ಬಿಜೆಪಿ ನಾಯಕರು, ರಾಹುಲ್ ಗಾಂಧಿ ದೇಶದ ಜನರ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಪಿಯೂಷ್ ಗೋಯಲ್ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. 

ಬಿಜೆಪಿಗೆ ತಿರುಗೇಟು ನೀಡುವ ಪ್ರಯತ್ನ ಮಾಡಿದ ಕಾಂಗ್ರೆಸ್ ನಾಯಕರು, ಅದಾನಿ ಕಂಪನಿಗಳ ಕುರಿತು ನೀಡಿದ ಹಿಂಡನ್ ಬರ್ಗ್ ಆಧರಿಸಿ ಜಂಟಿ ಸದನ ಸಮಿತಿ ರಚಿಸಬೇಕು. ಗ್ಯಾಸ್ ಸೇರಿದಂತೆ ಅಗತ್ಯ ಬೆಲೆಗಳ ಏರಿಕೆ ಹಾಗೂ ವಿಪಕ್ಷ ನಾಯಕರ ಮೇಲೆ ತನಿಖಾ ಸಂಸ್ಥೆಗಳ ದಾಳಿಯ ಬಗ್ಗೆ ಚರ್ಚೆ ನಡೆಯಬೇಕು ಎಂದು ಆಗ್ರಹಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments