Publish Date: Fri, 11 Nov 2022 (08:49 IST)
Updated Date: Fri, 11 Nov 2022 (09:42 IST)
ಮಾಸ್ಕೋ : ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಇಂದು ರಷ್ಯಾಗೆ ಭೇಟಿ ನೀಡಿದ್ದು,
ಅಲ್ಲಿ ರಷ್ಯಾ ಉಕ್ರೇನ್ ಮೇಲೆ ನಡೆಸುತ್ತಿರುವ ಮಿಲಿಟರಿ ಕಾರ್ಯಾಚರಣೆ ಬಗ್ಗೆ ಮಾತನಾಡಿ, ಇದು ಯುದ್ಧದ ಸಮಯವಲ್ಲ ಎಂದು ಪುನರುಚ್ಚರಿಸಿದ್ದಾರೆ.
ರಷ್ಯಾದ ರಾಜಧಾನಿ ಮಾಸ್ಕೋಗೆ ತೆರಳಿದ ಜೈಶಂಕರ್ ಅವರು ಇಂದು ತಮ್ಮ ಸಹವರ್ತಿ ಸರ್ಗೆ ಲಾವ್ರೋ ಅವರನ್ನು ಭೇಟಿಯಾಗಿದ್ದಾರೆ.
ಈ ವೇಳೆ ಮಾತನಾಡಿದ ಜೈಶಂಕರ್, ಅಂತಾರಾಷ್ಟ್ರೀಯ ಪರಿಸ್ಥಿತಿಗೆ ಸಂಬಂಧಿಸಿದಂತೆ, ಕಳೆದ ಕೆಲವು ವರ್ಷಗಳಿಂದ ಕೋವಿಡ್ ಸಾಂಕ್ರಾಮಿಕ, ಹಣಕಾಸಿನ ಒತ್ತಡಗಳು ಮತ್ತು ವ್ಯಾಪಾರದ ತೊಂದರೆಗಳಿಂದ ಜಾಗತಿಕ ಆರ್ಥಿಕತೆಯ ಮೇಲೆ ಪರಿಣಾಮ ಬೀರಿದೆ. ಆದರೆ ಇದೀಗ ಮತ್ತೆ ಉಕ್ರೇನ್ನೊಂದಿಗಿನ ಸಂಘರ್ಷದ ಪರಿಣಾಮವನ್ನು ನೋಡುತ್ತಿದ್ದೇವೆ ಎಂದು ಹೇಳಿದರು.