Webdunia - Bharat's app for daily news and videos

Install App

ಅಮರನಾಥ ಯಾತ್ರಿಗಳ ಮೇಲಿನ ದಾಳಿ ರೂವಾರಿ ಉಗ್ರನನ್ನ ಕೊಂದ ಭದ್ರತಾ ಪಡೆ

Webdunia
ಗುರುವಾರ, 14 ಸೆಪ್ಟಂಬರ್ 2017 (18:25 IST)
ಅಮರನಾಥ ಯಾತ್ರಿಗಳ ಮೇಲಿನ ದಾಳಿಯ ಮಾಸ್ಟರ್ ಮೈಂಡ್, ಕಾಶ್ಮೀರದಲ್ಲಿ ಸಕ್ರಿಯನಾಗಿದ್ದ ಲಷ್ಕರ್ ಇ ತಯಿಬಾ ಉಗ್ರ ಅಬು ಇಸ್ಮಾಯಿಲ್`ನನ್ನ ಭದ್ರತಾ ಪಡೆ ಯೋಧರು  ಗುರುವಾರ ಹೊಡೆದುರುಳಿಸಿದ್ದಾರೆ.

ಶ್ರೀನಗರದ ಹೊರವಲಯದ ನೌಗಮ್`ನ ಅರಿಬಾಗ್ ಪ್ರದೇಶದಲ್ಲಿ ನಡೆದ ಎನ್`ಕೌಂಟರ್`ನಲ್ಲಿ ಉಗ್ರ ಅಬು ಇಸ್ಮಾಯಿಲ್ ಹತ್ಯೆ ಮಾಡಲಾಗಿದ್ದು, ಪೊಲೀಸ್ ಮತ್ತು ಭದ್ರತಾ ಪಡೆ ಯೋಧರ ಬಹುದೊಡ್ಡ .ಬೇಟೆ ಇದಾಗಿದೆ. ಈತ ಇತ್ತೀಚೆಗೆ ಅಮರನಾಥ ಯಾತ್ರಿಕರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಪ್ರಮುಖ ರೂವಾರಿಯಾಗಿದ್ದಾನೆ. ಅಮರನಾಥ ಯಾತ್ರಿಕರ ಮೇಲೆ ನಡೆದ ದಾಳಿಯಲ್ಲಿ 6 ಮಹಿಳಾ ಯಾತ್ರಿಕರು ಸೇರಿ 7 ಮಂದಿ ಹತರಾಗಿದ್ದರು. 19 ಮಂದಿ ಗಾಯಗೊಂಡಿದ್ದರು.

ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಪ್ರದೇಶವನ್ನ ಸುತ್ತುವರೆದ ಪೊಲೀಸ್ ಮತ್ತು ಭದ್ರತಾ ಪಡೆ ಯೋಧರು ಇಂಟರ್ನೆಟ್ ಸೌಲಭ್ಯ ಬಂದ್ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ. ಅಬು ಇಸ್ಮಾಯಿಲ್ ಜೊತೆ ಹತನಾದ ಮತ್ತೊಬ್ಬ ಉಗ್ರನನ್ನ ಪಾಕಿಸ್ತಾನ ನಿವಾಸಿ ಚೋಟಾ ಖಸೀಮ್ ಎಂದು ಗುರ್ತಿಸಲಾಗಿದೆ. ಅಬು ಇಸ್ಮಾಯಿಲ್ ಬೇಟೆಗೆ ಜುಲೈ 12ರಿಂದಲೆ ಯೋಧರು ಕಾರ್ಯಾಚರಣೆಗೆ ಇಳಿದಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

IMD, ಕೇರಳಕ್ಕೆ ನಾಲ್ಕೈದು ದಿನಗಳಲ್ಲಿ ಮುಂಗಾರು ಪ್ರವೇಶ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments