Webdunia - Bharat's app for daily news and videos

Install App

ಶಾಲಾ ಶುಲ್ಕ ನೀಡದಿದ್ದರಿಂದ ಇಬ್ಬರು ವಿದ್ಯಾರ್ಥಿನಿಯರನ್ನು ನಗ್ನಗೊಳಿಸಿದ ಶಾಲಾ ಶಿಕ್ಷಕಿ

Webdunia
ಶನಿವಾರ, 17 ಜೂನ್ 2017 (19:09 IST)
ಬಿಹಾರದ ಬೇಗುಸಾಯಿ ಜಿಲ್ಲೆಯಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿನಿಯರು ಸಮವಸ್ತ್ರಗಳಿಗೆ ಹಣ ಪಾವತಿಸಲು ವಿಫಲವಾಗಿರುವುದರಿಂದ ಆಕ್ರೋಶಗೊಂಡ ಶಿಕ್ಷಕಿಯೊಬ್ಬಳು ಒತ್ತಾಯಪೂರ್ವಕವಾಗಿ ಅವರ ಬಟ್ಟೆಯನ್ನು ಬಿಚ್ಚಿ ನಗ್ನಗೊಳಿಸಿದ ಘಟನೆ ವರದಿಯಾಗಿದೆ.
 
ಜಿಲ್ಲೆಯ ವೀರ್ಪುರ್ ಗ್ರಾಮದ ಬಡ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿನಿಯರು ಸಹೋದರಿಯರಾಗಿದ್ದಾರೆ.
 
ಬಾಲಕಿಯರ ತಂದೆ ನೀಡಿದ ದೂರಿನ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಕಿ ಅಂಜನಾ ಕುಮಾರಿ ಮತ್ತು ಶಾಲೆಯ ನಿರ್ದೇಶಕ ಎನ್‌.ಕೆ.ಝಾ ಎನ್ನುವವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಮಿಶ್ರಾ ತಿಳಿಸಿದ್ದಾರೆ. 
 
ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಪುತ್ರಿಯರನ್ನು ಶಾಲೆಯಿಂದ ಕರೆದುಕೊಂಡು ಬರಲು ತಂದೆ ಹೋಗಿದ್ದಾಗ ಕಿರಿಯ ಪುತ್ರಿ ಶಿಕ್ಷಕಿ ಅಂಜನಾ ಕುಮಾರಿ ನಿಮ್ಮನ್ನು ಭೇಟಿಯಾಗಲು ಬಯಸಿದ್ದಾಳೆ ಎಂದು ಹೇಳಿದ್ದಾಳೆ. ಶಿಕ್ಷಕಿ ಕುಮಾರಿಯನ್ನು ಭೇಟಿ ಮಾಡಲು ಹೋದಾಗ ಸಮವಸ್ತ್ರದ ಹಣವನ್ನು ಪಾವತಿಸುವಂತೆ ತಿಳಿಸಿದ್ದಾಳೆ. ಜೂನ್ ತಿಂಗಳೊಳಗಾಗಿ ಹಣವನ್ನು ಪಾವತಿಸುವುದಾಗಿ ಮನವಿ ಮಾಡಿದರೂ ನನ್ನ ಎದುರಿಗೆ ಪುತ್ರಿಯರ ಬಟ್ಟೆ ಬಿಚ್ಚಿ ಅರೆನಗ್ನಗೊಳಿಸಿದ್ದಾಲೆ. ಶಾಲೆಯ ನಿರ್ದೇಶಕರ ಬಳಿ ತೆರಳಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಅರೆನಗ್ನಾವಸ್ಥೆಯಲ್ಲಿಯೇ ಪುತ್ರಿಯನ್ನು ಮನೆಗೆ ಕರೆದುಕೊಂಡು ಹೋಗುವಂತೆ ಗದರಿದ್ದಾಗಿ ತಿಳಿಸಿದ್ದಾರೆ. 
 
ರಾಜ್ಯದ ಶಿಕ್ಷಣ ಖಾತೆ ಸಚಿವ ಅಶೋಕ್ ಚೌಧರಿ ಘಟನೆಯನ್ನು ಖಂಡಿಸಿ, ಪ್ರಕರಣದ ತನಿಖೆ ನಡೆಸುವುದಾಗಿ ಭರವಸೆ ನೀಡಿದ್ದಾರೆ.


ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ..
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಬೆಲೆ ಏರಿಕೆ ನಿರೀಕ್ಷೆಯಲ್ಲಿದ್ದ ಅಡಿಕೆ ಬೆಳೆಗಾರರಿಗೆ ನಿರಾಸೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಆತಂಕ

Mamata Banerjee:ಪಾಕಿಸ್ತಾನ ವಿರುದ್ಧ ವಿಶ್ವಕ್ಕೆ ಮನವರಿಕೆ ಮಾಡಲು ನಮ್ಮ ಸಂಸದರನ್ನು ಕಳಿಸಲ್ಲ ಎಂದ ಮಮತಾ ಬ್ಯಾನರ್ಜಿ

Pakistan: ಉಗ್ರ ಸೈಫುಲ್ಲಾ ಮೃತದೇಹಕ್ಕೆ ರಾಷ್ಟ್ರಧ್ವಜ: ಪಾಕಿಸ್ತಾನದ ನಾಟಕ ಬಯಲು

India Pakistan: ಭಾರತದ ವಿರುದ್ಧ ಸೋತು ಸುಣ್ಣವಾದ ಬಳಿಕ ಚೀನಾ ಬಳಿ ಓಡಿದ ಪಾಕಿಸ್ತಾನ

ಮುಂದಿನ ಸುದ್ದಿ