Webdunia - Bharat's app for daily news and videos

Install App

ನಿರ್ಮಾಣ ಹಂತದ ವೈಎಸ್‌ಆರ್‌ಸಿಪಿ ಕೇಂದ್ರ ಕಚೇರಿ ಧ್ವಂಸ: ಜಗನ್ ಮೋಹನ್‌ ಆಕ್ರೋಶ

Sampriya
ಶನಿವಾರ, 22 ಜೂನ್ 2024 (14:15 IST)
Photo Courtesy X
ಹೈದರಾಬಾದ್: ಚಂದ್ರಬಾಬು ನಾಯ್ಡು ನೇತೃತ್ವದ ಎನ್‌ಡಿಎ ರಾಜ್ಯ ಸರ್ಕಾರ ನಿರ್ಮಾಣ ಹಂತದಲ್ಲಿರುವ ವೈಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಕೇಂದ್ರ ಕಚೇರಿಯನ್ನು ಧ್ವಂಸಗೊಳಿಸಿದೆ ಎಂದು ಪಕ್ಷದ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಶನಿವಾರ ಹೇಳಿದ್ದಾರೆ.

ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ಕಚೇರಿಯನ್ನು ನೆಲಸಮಗೊಳಿಸಲಾಗಿದೆ ಎಂದು  ಜಗನ್ ಮೋಹನ್ ರೆಡ್ಡಿ ಆರೋಪಿಸಿದ್ದಾರೆ.

ಚಂದ್ರಬಾಬು ನಾಯ್ಡು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಬಹುತೇಕ ಪೂರ್ಣಗೊಂಡಿದ್ದ ವೈಎಸ್‌ಆರ್‌ಸಿಪಿ ಕೇಂದ್ರ ಕಚೇರಿಯನ್ನು ಸರ್ವಾಧಿಕಾರಿಯಂತೆ ಯಂತ್ರಗಳು ಮತ್ತು ಬುಲ್ಡೋಜರ್‌ಗಳಿಂದ ವೈಎಸ್‌ಆರ್‌ಸಿಪಿಯ ಕೇಂದ್ರ ಕಚೇರಿಯನ್ನು ಕೆಡವಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಜಗನ್ ಫೋಸ್ಟ್ ಮಾಡಿದ್ದಾರೆ.

ಸಿಆರ್‌ಡಿಎ (ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ) ದ ಕ್ರಮಗಳನ್ನು ಪ್ರಶ್ನಿಸಿ ವೈಎಸ್‌ಆರ್‌ಸಿಪಿ ಶುಕ್ರವಾರ ಹೈಕೋರ್ಟ್‌ಗೆ ಮೊರೆ ಹೋಗಿ್ತು. ಯಾವುದೇ ಧ್ವಂಸ ಕಾರ್ಯಾಚರಣೆ ನಡೆಯದಂತೆ ಕೋರ್ಟ್ ಆದೇಶ ನೀಡಿತ್ತು.ಆದರೆ, ಪ್ರಾಧಿಕಾರ ಹಿಂದೆ ಸರಿದಿದ್ದು, ಕಟ್ಟಡವನ್ನು ಧ್ವಂಸಗೊಳಿಸಿದೆ ಎಂದು ವೈಎಸ್‌ಆರ್ ಸಿಪಿ ಹೇಳಿದೆ.

ಶನಿವಾರ ಮುಂಜಾನೆ 5.30ರ ಸುಮಾರಿಗೆ ಧ್ವಂಸ ಕಾರ್ಯಾಚರಣೆ ಪ್ರಾರಂಭವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments