Daily Horoscope

ಇಲಿ ಕಚ್ಚಿ ಅಸ್ವಸ್ಥಗೊಂಡ ಯುಪಿ ಸಚಿವ !

Webdunia
ಮಂಗಳವಾರ, 3 ಮೇ 2022 (13:24 IST)
ಲಕ್ನೋ : ಉತ್ತರಪ್ರದೇಶದ ಬಾಂದಾ ಜಿಲ್ಲೆಗೆ ನಿನ್ನೆ ಭೇಟಿ ನೀಡಿದ್ದ ವೇಳೆ ಇಲ್ಲಿನ ಸರ್ಕೀಟ್ ಹೌಸ್ನಲ್ಲಿ ತಂಗಿದ್ದ ಸಚಿವರಿಗೆ ಇಲಿ ಕಚ್ಚಿದ್ದರಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ.

ಯುವಜನ ಅಭಿವೃದ್ಧಿ ಮತ್ತು ಕ್ರೀಡಾ ಸಚಿವ ಗಿರೀಶ್ಚಂದ್ರ ಯಾದವ್ ಅವರು ಬಾಂದಾ ಜಿಲ್ಲೆಗೆ ತೆರಳಿದ್ದರು. ರಾತ್ರಿ ಮಾವೈ ಬೈಪಾಸ್ನಲ್ಲಿರುವ ಒಂದು ಸರ್ಕಿಟ್ ಹೌಸ್ನಲ್ಲಿ ಉಳಿದುಕೊಂಡಿದ್ದರು. ರಾತ್ರಿ ಮಲಗಿದ್ದ ವೇಳೆ ಅವರಿಗೆ ಇಲಿಕಚ್ಚಿದೆ. ಸ್ವಲ್ಪ ಸಮಯ ಕಳೆದ ಬಳಿಕ ಅವರು ಕೊಂಚ ಅಸ್ವಸ್ಥರಾಗಿದ್ದರು ಎನ್ನಲಾಗಿದೆ. 

ಇದು ಅಲ್ಲಿನ ಸಿಬ್ಬಂದಿಯ ಗಮನಕ್ಕೆ ಬಂದಿದ್ದು, ಕೆಲವೇ ಕ್ಷಣಗಳಲ್ಲಿ ಅವರನ್ನು ಲಕ್ನೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ ಬಳಿಕ, ಡಿಸ್ಚಾರ್ಜ್ ಮಾಡಲಾಗಿದೆ. ಸಧ್ಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗುತ್ತಿದೆ.

ಸಚಿವರ ಬಲಗೈ ಬೆರಳಿಗೆ ಏನೋ ಕಚ್ಚಿರುವ ಗುರುತು ಪತ್ತೆಯಾಗಿದ್ದು, ಹಾವು, ಚೇಳು ಕಚ್ಚಿದೆ ಎಂದು ಗಾಬರಿಗೊಂಡಿದ್ದರು. ಸ್ಥಳ ಪರಿಶೀಲನೆ ಮಾಡಿದಾಗ ಇಲಿ ಇದ್ದಿದ್ದು ಕಂಡುಬಂದಿದೆ.

ಸೋಮವಾರ ಮುಂಜಾನೆ 3 ಗಂಟೆಯಲ್ಲಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಚಿಕಿತ್ಸೆ ನೀಡಲಾಗಿದ್ದು ಆರೋಗ್ಯ ಸ್ಥಿರವಾಗಿದೆ ಎಂದು ಜಿಲ್ಲಾ ಆಸ್ಪತ್ರೆಯ ಮುಖ್ಯ ವೈದ್ಯಕೀಯ ಅಧೀಕ್ಷಕ (ಸಿಎಂಎಸ್) ಡಾ.ಎಸ್.ಎನ್.ಮಿಶ್ರಾ ತಿಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments